BREAKING NEWS : ಶಿವಮೊಗ್ಗದಲ್ಲಿ ಭೂಕಂಪ | ಭಾರೀ ಶಬ್ದಕ್ಕೆ ಬೆಚ್ಚಿ ಬಿದ್ದ ಜನ

ಇತ್ತೀಚಿನ ದಿನಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿಯ ಜೊತೆಗೆ ಅತಿಯಾಗಿ ಪ್ರಕೃತಿಯ ಮರಗಳ ನಾಶ, ಅಕ್ರಮ ಗಣಿಗಾರಿಕೆ, ಮರಳು ದಂಧೆಗಳಿಂದ ಮಣ್ಣಿನ ಭೂಪದರದ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಭೂಕಂಪನದ ಜೊತೆಗೆ ಭಾರಿ ಶಬ್ದ ಕೇಳಿ ಜನ ಬೆಚ್ಚಿ ಬೀಳಿಸಿದ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತವೆ. ಈ ನಡುವೆ ಶಿವಮೊಗ್ಗದಲ್ಲಿ ಕೂಡ ಭೂಮಿ ಕಂಪಿಸಿದ ಅನುಭವವಾಗಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಅಂದಾಜಿನಲ್ಲಿ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ನಡುಕ ಹುಟ್ಟಿಸಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಕಂಪನವಾಗಿದ್ದರಿಂದ ಅಲ್ಲಿನ ಜನರಲ್ಲಿ ಆತಂಕ ಮನೆ ಮಾಡಿದೆ .

ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವದ ಜೊತೆಗೆ ಭಾರಿ ಶಬ್ದ ಕೇಳಿಬಂದಿದ್ದು ಜನರ ಮನದಲ್ಲಿ ಭಯದ ವಾತಾವರಣ ಹುಟ್ಟುಹಾಕಿದೆ.

Leave A Reply

Your email address will not be published.