ಈದ್ ಮೀಲಾದ್ ಹಬ್ಬದ ಹಿನ್ನೆಲೆ : ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ

ಬೆಳ್ಳಾರೆ : ಈದ್ ಮೀಲಾದ್ ಹಬ್ಬದ ಹಿನ್ನೆಲೆ ಬೆಳ್ಳಾರೆ ಪೋಲಿಸ್ ಠಾಣಾ ವತಿಯಿಂದ ಶಾಂತಿಸಭೆಯು ಶುಕ್ರವಾರ ದಂದು ನಡೆಯಿತು.

ಬೆಳ್ಳಾರೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ರವರ ನೇತೃತ್ವದಲ್ಲಿ ಸಭೆ ನಡೆಯಿತು.

ಠಾಣಾಧಿಕಾರಿ ಸುಹಾಸ್ ಮಾತನಾಡಿ , ಶಾಂತಿಯುತವಾಗಿ ಹಬ್ಬವನ್ನು ಆಚರಿಸಿ, ಹಬ್ಬ ಯಶಸ್ವಿಯಾಗಿ ನಡೆಯಲಿ ಎಂದರು.

ಹಬ್ಬದ ಸಂದರ್ಭದಲ್ಲಿ ಏನೇ ಅಹಿತಕರ ಘಟನೆಗೆ ಎಡೆಯಾದರೆ ತಕ್ಷಣ ಠಾಣೆಗೆ ಮಾಹಿತಿ ನೀಡಿ ಸಹಕರಿಸಿ ಎಂದರು.

ಸಭೆಯಲ್ಲಿ ಬೆಳ್ಳಾರೆ ಠಾಣಾ ವ್ಯಾಪ್ತಿಗೆ ಒಳಪಟ್ಟ ಮಸೀದಿಯ ಪ್ರಮುಖರು ಉಪಸ್ಥಿತರಿದ್ದರು.

Leave A Reply

Your email address will not be published.