SC ST Reservation : ಮೀಸಲಾತಿ ವಿಷಯದಲ್ಲಿ ಬಿಜೆಪಿಯಿಂದ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ – ನಳಿನ್ ಕುಮಾರ್ ಕಟೀಲ್

ರಾಜ್ಯದ ಹಿಂದುಳಿದ ವರ್ಗದ ಮೀಸಲಾತಿ ನೀಡಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳ ಮೂಲಕ ಜನರಿಗೆ ಆರ್ಥಿಕವಾಗಿ ಜೊತೆಗೆ ಸಾಲ ಸೌಲಭ್ಯ, ಉದ್ಯೋಗ ಅವಕಾಶ ಅಷ್ಟೆ ಅಲ್ಲದೆ ಸ್ವಾವಲಂಬಿಯಾಗಿ ಜೀವಿಸಲು ನೆರವಾಗುವ ಉದ್ದೇಶದಿಂದ ಸ್ವ ಉದ್ಯೋಗ ತರಬೇತಿ ನೀಡಿ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ.


ಈ ನಡುವೆ ಎಸ್‍ಸಿ, ಎಸ್‍ಟಿ ಮೀಸಲಾತಿ ( SC, ST Reservation ) ಹೆಚ್ಚಳದ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ಯೋಜನೆಯಲ್ಲಿದೆ. ಹಾಗಾಗಿ, ಬಿಜೆಪಿ ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶನ ಮಾಡಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ( BJP State President Nalin Kumar Kateel ) ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಪ್ರಸ್ತುತ ಜನಸಂಖ್ಯೆ ಆಧಾರದಡಿ ಮೀಸಲಾತಿ ನಿರ್ಧಾರ ಕೈಗೊಳ್ಳುವ ಅವಶ್ಯಕತೆ ಇದ್ದು, 1950ರಲ್ಲಿ ಮಾಡಿದ ಜನಗಣತಿ ಆಧಾರದಲ್ಲಿ ಮೀಸಲಾತಿ ಪ್ರಮಾಣ ನಿಗದಿಪಡಿಸಲಾದರೂ ಕೂಡ ಅದರ ಸ್ಥೂಲ ಮಾರ್ಪಾಡಿನೊಂದಿಗೆ ಪ್ರಸ್ತುತ ಇರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಕ್ರಾಂತಿಕಾರಿ ನಿರ್ಧಾರವನ್ನು ಕರ್ನಾಟಕ ಬಿಜೆಪಿ ಸರಕಾರ ತೆಗೆದುಕೊಂಡಿದ್ದು, ಸರ್ಕಾರದ ನಿರ್ಧಾರಕ್ಕೆ ಕಟೀಲ್ ಅವರು ಮೆಚ್ಚುಗೆಯ ಜೊತೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಮತ್ತು ಸಚಿವ ಸಂಪುಟದ ( Karnataka Cabinet Meeting ) ಸದಸ್ಯರನ್ನು ಅವರು ಅಭಿನಂದಿಸಿದ್ದಾರೆ.

ಅನೇಕ ವರ್ಷಗಳಿಂದ ಜ್ವಲಂತ ಸಮಸ್ಯೆಯಾಗಿ ನೆನೆಗುದಿಗೆ ಬಿದ್ದ ವಿಚಾರವನ್ನು ಬೇರೆ ಪಕ್ಷಗಳು ಕಾರಣ ನೀಡುತ್ತಾ ಮುಂದೂಡಿದರು ಕೂಡ ಬಿಜೆಪಿ ಸರ್ಕಾರ ನಿರ್ಧಾರ ಕೈಗೊಂಡು ಜಾರಿಗೆ ತರಲು ಮುಂದಾಗಿದ್ದು, ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿ ಪ್ರತಿಯೊಂದು ಸಮಾಜವನ್ನು ಮೇಲಕ್ಕೆ ತರುವುದರಲ್ಲಿ ನಂಬಿಕೆ ಇಟ್ಟ ಪಕ್ಷವಾಗಿದ್ದು, ಬಡವರು, ಶೋಷಿತರಿಗೆ ಬೇಕಾದ ಎಲ್ಲ ಅಗತ್ಯ ಮೀಸಲಾತಿಯ ಸವಲತ್ತನ್ನು ಕೊಡುವ ದಿಟ್ಟ ಮತ್ತು ದೃಢ ನಿರ್ಧಾರವನ್ನು ಬಿಜೆಪಿ ತೆಗೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇದಕ್ಕಾಗಿ ಅನೇಕ ಆಯೋಗಗಳ ರಚನೆ ಮಾಡಲಾಗಿತ್ತು. ನ್ಯಾ. ನಾಗಮೋಹನ್ ದಾಸ್ ಆಯೋಗದ ಶಿಫಾರಸಿನ ಅನ್ವಯ ರಾಜ್ಯ ಸರಕಾರವು ಇದಕ್ಕೆ ಒಪ್ಪಿಗೆ ಕೊಟ್ಟು ಜಾರಿಗೆ ತರುವ ಪ್ರಯತ್ನದಲ್ಲಿದೆ. ಹಿಂದೆ ಕುಲದೀಪ್ ಸಿಂಗ್ ಆಯೋಗದ ಶಿಫಾರಸಿನಡಿ ಬಿಜೆಪಿ ದಿಟ್ಟತನದ ತೀರ್ಮಾನ ಕೈಗೊಳ್ಳುವ ಮೂಲಕ ಜನತೆಗೆ ನೆರವಾಗಿದ್ದಾರೆ.

ಬೇರೆ ಬೇರೆ ರಾಜ್ಯಗಳಲ್ಲಿ ಇಂಥ ಸಮಸ್ಯೆ ಕಾಣಿಸಿಕೊಂಡಾಗ ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಸ್ಟಿಸ್ ರೋಹಿಣಿ ಆಯೋಗವನ್ನು ನೇಮಿಸಿದೆ. ಈ ಆಯೋಗದ ಶಿಫಾರಸ್ಸು ಲಭಿಸಿದ ಬಳಿಕ ಮಿಕ್ಕ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ವರ ಹಿತ ಕಾಪಾಡುವ ಹೊಣೆ ಹೊತ್ತು, ಶ್ರೀಯುತ ನರೇಂದ್ರ ಮೋದಿ ಏಳಿಗೆಯ ಗುರಿಯ ಕಡೆಗೆ ಹೆಜ್ಜೆ ಇಡಲಿದ್ದಾರೆ.

ಹಬ್ಬದ ಸಂಭ್ರಮದ ನಡುವೆ ಬಹುದಿನಗಳ ಬೇಡಿಕೆ ಈಡೆರಿದ್ದು, ವಿಜಯದಶಮಿಯ ಸಲುವಾಗಿ ದೊರೆತಿರುವ ಬಹು ದೊಡ್ಡ ಉಡುಗೊರೆ ಇದಾಗಿದೆ ಎಂದು ಕಟೀಲ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬದುಕಿನ ಒಳಿತಿಗೆ ಅನುಕೂಲ ಆಗಲಿದ್ದು, ಅವರ ಅಂತಸ್ಸತ್ವದ ಪುನರ್ ಜಾಗೃತಿಗೆ ಇದು ಪೂರಕವಾಗಲಿದೆ ಎಂದು ಆಶಿಸಿದ್ದಾರೆ. ಎಲ್ಲ ವರ್ಗಗಳ ಕಲ್ಯಾಣಕ್ಕೆ ಅಡಿ ಇಟ್ಟು ಆರ್ಥಿಕವಾಗಿ ಅಲ್ಲದೆ ಸ್ವಾವಲಂಬಿಯಾಗಿ ಜೀವಿಸಲು ನೆರವಾಗುವ ಉದ್ದೇಶದಿಂದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದೆ.

Leave A Reply

Your email address will not be published.