‘ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ..? – ಸಿದ್ದರಾಮಯ್ಯ ವಿರುದ್ಧ ಕಟೀಲ್ ವಾಗ್ದಾಳಿ

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗದಗದಲ್ಲಿ ಮಾತನಾಡುತ್ತಾ, ಎಸ್. ಸಿ, ಎಸ್ ಟಿ ಮೀಸಲಾತಿ ನಮ್ಮ ಕೂಸು ಎಂಬ ಸಿದ್ದರಾಮಯ್ಯರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ..? ಪಿಎಫ್‌ಐ ಸಂಘಟನೆ ಸಿದ್ದರಾಮಯ್ಯರ ಕೂಸು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಈ ಹಿಂದೆ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಏನು ಮಾಡಿದರು? ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳ ಮಾಡಬಹುದಿತ್ತಲ್ವಾ ? ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇಂದು ಎಸ್. ಸಿ, ಎಸ್ ಟಿ ಯವರ ಬೇಡಿಕೆಗೆ ಗೌರವ ಏನಾದರೂ ನೀಡಿದ್ದರೇ, ಅದು ಸಿಎಂ ಬೊಮ್ಮಾಯಿ ಸರ್ಕಾರ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಆ ಕೆಲಸ ಮಾಡದೇ ಕಾಲಹರಣ ಮಾಡಿದರು,ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್ ವಾಗ್ದಾಳಿ ನಡೆಸಿದರು.

H.D.ದೇವೇಗೌಡರಿಗೆ ಸಿದ್ದರಾಮಯ್ಯ ಅನ್ಯಾಯ ಮಾಡಿದರು. ಗುರುಗಳನ್ನೇ ಮೆಟ್ಟಿ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಹೋದರು. ಸಿದ್ದರಾಮಯ್ಯರದ್ದು ಅನೈತಿಕ ಸಂಬಂಧದ ರಾಜಕಾರಣ ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

Leave A Reply

Your email address will not be published.