ಮಂಗಳೂರು : ಇಂದು ಬೆಳ್ಳಂಬೆಳಗ್ಗೆ ನಿಷೇದಿತ PFI ಮುಖಂಡರ ಮನೆ ಮೇಲೆ ಪೊಲೀಸ್ ದಾಳಿ | ಐವರು ವಶಕ್ಕೆ

ಮಂಗಳೂರು: ಇಂದು (ಸೆ.13) ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ನಿಷೇಧಿತ ಪ್ಯಾಪುಲರ್ ಫ್ರೆಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದ ತಂಡ ಮತ್ತೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಪಿಎಫ್ ಐ ಹಾಗೂ ಎಸ್‌ ಡಿಪಿಐ ಮುಖಂಡರ ಮೇಲೆ ಪೊಲೀಸರು ದಾಳಿ ಮಾಡಿದ್ದು ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ ಪೊಲೀಸರು ದಾಳಿ ಮಾಡಿದ್ದಾರೆ. ಕೇಂದ್ರ ಸರಕಾರ ಕೆಲದಿನಗಳ ಹಿಂದೆಯಷ್ಟೇ ದೇಶದಲ್ಲಿ ಪಿಎಫ್ ಐ 5 ವರ್ಷ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಅದರ ನಂತರ ತನಿಖೆ ತೀವ್ರಗೊಂಡಿದ್ದು ಎಲ್ಲಾ ಕಡೆ ದಾಳಿ ನಡೆಯುತ್ತಿದೆ. ಮಹತ್ವದ ಮಾಹಿತಿ ಕೂಡಾ ಎನ್ ಐಎ ಬಹಿರಂಗ ಗೊಳಿಸಿದೆ. ಈಗ ಪಿಎಫ್ ಐ ವಿರುದ್ಧ ರಾಜ್ಯದ ಪೊಲೀಸರು ಮತ್ತೆ ಕಾರ್ಯಾಚರಣೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

Leave A Reply

Your email address will not be published.