ಬೆಂಗಳೂರಿನಲ್ಲಿ ಯವರೂಪಿ ಗುಂಡಿಗೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ತಾಯಿ ದುರ್ಮರಣ

ಬೆಂಗಳೂರು : ಸಿಲಿಕಾನ್‌ ಸಿಟಿಯ ಸುಜಾತ ಥಿಯೇಟರ್‌ ಬಳಿ ಸ್ಕೂಟಿಯಲ್ಲಿ ತಾಯಿ – ಮಗಳು ತೆರಳುವಾಗ ಗುಂಡಿ ತಪ್ಪಿಸಲು ಹೋಗಿ ಬಿದ್ದು, ಚಿಕಿತ್ಸೆ ಫಲಿಸದೇ ಗಾಯಗೊಂಡ ತಾಯಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಸ್ಕೂಟಿಯಿಂದ ತಾಯಿ – ಮಗಳು ಬಿದ್ದ ತಕ್ಷಣ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಹರಿದು ಗಾಯಗೊಂಡಿದ್ದರು. ತಕ್ಷಣ ಇಬ್ಬರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿದ್ದರು. ಆದರೂ ಚಿಕಿತ್ಸೆ ಫಲಿಸದೇ ತಾಯಿ ಉಮಾ ಸಾವನ್ನಪ್ಪಿದ್ದಾರೆ. ಮಗಳು ವನಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದ ಪಡೆಯುತ್ತಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಇದಾಗಿತ್ತು.

Leave A Reply

Your email address will not be published.