ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರ ಕಾರ್ಯಾಚರಣೆ : ಅಂತರಾಜ್ಯ ಕಳ್ಳನ ಬಂಧನ

ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರಾಜ್ಯ ಮನೆಕಳ್ಳನನ್ನು ಬಂಧಿಸಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಈ ಕಳ್ಳತನ ಪ್ರಕರಣವನ್ನು ಭೇಧಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯ ರವಿ.ಎಂ.ವೈ ಮತ್ತು ರಾಮಕೃಷ್ಣ, ರವರ ನೇತೃತ್ವದ ತಂಡ ಆರೋಪಿ ಮಹಮ್ಮದ್ ಕೆ.ಯು(42 ವರ್ಷ ),ತಂದೆ: ಯೂಸುಫ್, ವಾಸ: ಕೊಲ್ಲಂ ವರಂಬಿಲ್ ಮನೆ, ಕುಟ್ಟಿಪರಂಬ್ ಅಂಚೆ, ಅಲಕೋಡು ಗ್ರಾಮ, ತಲಿಪರಂಬ ತಾಲೂಕು, ಕಣ್ಣೂರು ಜಿಲ್ಲೆ, ಕೇರಳ ರಾಜ್ಯ ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು 2,50,000 /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.

ಈ ಪ್ರಕರಣವನ್ನು ಭೇದಿಸುವಲ್ಲಿ ಮಾನ, ಪೊಲೀಸ್‌ ಅಧೀಕ್ಷಕರಾದ ಋಷಿಕೇಶ್ ಸೋನಾವಣೆ, ಮಾನ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಕುಮಾರ್ ಚಂದ್ರ ಪುತ್ತೂರು ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾದ ಡಾ.ವೀರಯ್ಯ, ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್‌ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್‌, ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್‌ ವೃತ್ತ ನಿರೀಕ್ಷಕರಾದ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ವುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವು ಮತ್ತು ರಾಮಕೃಷ್ಣ, ಸಿಬ್ಬಂದಿಗಳಾದ ಪ್ರೊ.ಪಿಎಸ್‌ಐ ಗಳಾದ ಕಾರ್ತಿಕ್ ಮತ್ತು ಭವಾವಿ, ಎಎಸ್‌ಐ ಮುರುಗೇಶ್, ಹೆಚ್ ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್.ರ, ಪ್ರಶಾಂತ್, ಸ್ಕರಿಯ ಪ್ರಶಾಂತ್ ರೈ ಪಿಸಿ ಹರ್ಷಿತ್‌ ರವರು ಸಹಕರಿಸಿದ್ದಾರೆ.

Leave A Reply

Your email address will not be published.