PM Kisan : ರೈತರೇ ನಿಮಗೊಂದು ಸಿಹಿ ಸುದ್ದಿ | ಖಾತೆಗೆ ಇಂದು ಹಣ ಜಮಾ | ಒಂದು ದೇಶ ಒಂದು ರಸಗೊಬ್ಬರ ಯೋಜನೆಗೆ ಚಾಲನೆ!!!

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು.

ಸುಮಾರು ಎರಡು ಕೋಟಿ ರೈತರ ಖಾತೆಗೆ 6,000 ಕೋಟಿ ರೂ.ಗಳನ್ನು ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ ಕೃಷಿ ಸಮ್ಮೇಳನ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ ನೀಡಲಿದ್ದು, ಎಲ್ಲಾ ರಸಗೊಬ್ಬರ ಕಂಪನಿಗಳು ‘ಭಾರತ್ ಬ್ರಾಂಡ್’ ಹೆಸರಿನಲ್ಲಿ ಯೂರಿಯಾ ಗೊಬ್ಬರ ಮಾರಾಟ ಮಾಡಲಿವೆ. ದೇಶಾದ್ಯಂತ 600 ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಲೋಕಾರ್ಪಣೆ ಮಾಡಲಾಗುವುದು.

Leave A Reply

Your email address will not be published.