ಕಡಬ: ಹಾಡಹಗಲೇ ಮಹಿಳೆಯ ಸರ ಎಳೆದು ಪರಾರಿಯಾದ ಕಳ್ಳರು!! ತಾಲೂಕಿನ ಗಡಿ ದಾಟಿಸದೆ ‘ದೈವದ ಕಾರ್ಣಿಕ’ !!

Share the Article

ಕಡಬ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಎಳೆದುಕೊಂಡು ಪರಾರಿಯಾಗುತ್ತಿದ್ದ ಕಾರಿನಲ್ಲಿ ಬಂದಿದ್ದ ದರೋಡೆಕೋರರ ತಂಡವೊಂದಕ್ಕೆ ಅಪಘಾತವಾಗಿ ಗಾಯಗೊಂಡ ಘಟನೆ ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿದೆ.

ಇಲ್ಲಿನ ರಸ್ತೆ ಬದಿಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಕಾರಿನಲ್ಲಿ ಬಂದ ತಂಡವೊಂಡು ಕುತ್ತಿಗೆಗೆ ಕೈ ಹಾಕಿ ಸರವನ್ನು ಎಳೆದು ಪರಾರಿಯಾಗಿತ್ತು. ಈ ವೇಳೆ ಮಹಿಳೆ ಕಿರುಚಾಡಿದ್ದು, ಕೂಡಲೇ ಸ್ಥಳೀಯರು ಕಾರ್ಯಪ್ರವೃತ್ತರಾಗಿ ಕಾರನ್ನು ಅಟ್ಟಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಸ್ಥಳೀಯರ ಕೈಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ವೇಗವಾಗಿ ಚಲಿಸಿದ ಕಾರು ಪಲ್ಟಿಯಾಗಿದ್ದು, ಕಾರಿನೊಳಗಿದ್ದ ದರೋಡೆಕೋರರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ

Leave A Reply

Your email address will not be published.