ಬಿಜೆಪಿ ಶಾಸಕ, ವಿಧಾನ ಪರಿಷತ್ ನ ಉಪಸಭಾಪತಿಯಾದ ಆನಂದ ಮಾಮನಿ ವಿಧಿವಶ

ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿಯಾದ ಆನಂದ ಮಾಮನಿ (56) ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ,ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ತಡರಾತ್ರಿಯ ವೇಳೆ ಅಸುನೀಗಿದ್ದಾರೆ.

ಆನಂದ ಯಾನೆ ವಿಶ್ವನಾಥ ಚಂದ್ರಶೇಖರ್ ಮಾಮನಿ ಇವರು ಬೆಳಗಾವಿ ಜಿಲ್ಲೆಯ ಸವದತ್ತಿ ಎಂಬಲ್ಲಿ ಜನವರಿ 18, 1966 ರಲ್ಲಿ ಜನಿಸಿದರು. ಇವರ ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ ಮತ್ತು ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ ಲಿಂಗಾಯತ ಸಮುದಾಯದವರಾದ ಇವರು ಸವದತ್ತಿಯ ಗೌರವ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

ಇವರು 2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಶಾಲಿಯಾಗಿದ್ದಾರೆ. ಮಗದೊಮ್ಮೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯವನ್ನು ಸಾಧಿಸಿದರು.ಇವರು ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Leave A Reply

Your email address will not be published.