BIG NEWS | SC, ST ಖೋಟಾ ರಿಸರ್ವೇಶನ್ ಹೆಚ್ಚಿಸಲು ಸರ್ಕಾರದ ಅನುಮತಿ, ರಾಜ್ಯಪಾಲರ ಒಪ್ಪಿಗೆ

ಎಸ್‌ಸಿ|ಎಸ್‌ಟಿ ಸಮುದಾಯಗಳ ಕೋಟಾವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಆದರೆ ಬರುವ ವಿಧಾನಸಭೆ ಅಧಿವೇಶನದಲ್ಲಿ ಅದನ್ನು ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ನುಡಿದಿದ್ದಾರೆ

SC/ST ಕೋಟಾವನ್ನು ಹೆಚ್ಚಿಸಲು ಅಕ್ಟೋಬರ್ 8 ರಂದು ಕ್ಯಾಬಿನೆಟ್ ತನ್ನ ಔಪಚಾರಿಕ ಅನುಮೋದನೆಯನ್ನು ನೀಡಿತ್ತು.
ನಂತರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ಮೀಸಲಾತಿಯನ್ನು ಹೆಚ್ಚಿಸುವ ಸುಗ್ರೀವಾಜ್ಞೆಯನ್ನು ಪ್ರಕಟಿಸಲು ಕರ್ನಾಟಕ ಕ್ಯಾಬಿನೆಟ್ ಅಕ್ಟೋಬರ್ 20 ರಂದು ನಿರ್ಧರಿಸಿತ್ತು.

ಇದಕ್ಕೂ ಮೊದಲು, ಕೋಟಾವನ್ನು ಹೆಚ್ಚಿಸಲು ಕಾರ್ಯಕಾರಿ ಆದೇಶವನ್ನು ನೀಡಲು ಸರ್ಕಾರ ನಿರ್ಧರಿಸಿತ್ತು, ಆದರೂ ಕಳೆದ ಗುರುವಾರದ ಸಭೆಯ ನಂತರ ಸುಗ್ರೀವಾಜ್ಞೆಯನ್ನು ಪ್ರಕಟಿಸಲು ನಿರ್ಧಾರವನ್ನು ಬದಲಾಯಿಸಲಾಯಿತು. ಈ ಬೆಳವಣಿಗೆಯನ್ನು ಗೆಜೆಟ್ ಅಧಿಸೂಚನೆಯ ಮೂಲಕ ಸಾರ್ವಜನಿಕಗೊಳಿಸಲಾಗಿದೆ. ಇನ್ನು ಕೆಲವು ಸಮುದಾಯಗಳನ್ನು ಸೇರಿಸಿಕೊಂಡ ನಂತರ ಜಾತಿಗಳ ಸಂಖ್ಯೆ ತೀವ್ರವಾಗಿ ಹೆಚ್ಚಿದೆ ಎಂದು ಗೆಜೆಟ್ ಅಧಿಸೂಚನೆ ಹೇಳಿದೆ. ರಾಜ್ಯದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳ ಒಟ್ಟು ಜನಸಂಖ್ಯೆಯು ಮಿತಿಯಿಂದ ಏರಿದೆ ಎಂದು ಅದು ಹೇಳಿದೆ.

ಸುಗ್ರೀವಾಜ್ಞೆಯ ಪ್ರಕಾರ ಎಸ್‌ಸಿಗಳಿಗೆ 15% ರಿಂದ 17% ಕ್ಕೆ ಮತ್ತು ಎಸ್‌ಟಿಗಳಿಗೆ 3% ರಿಂದ 7% ಕ್ಕೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಆ ಮೂಲಕ ಇದು ಇಂದಿರಾ ಸಾಹ್ನಿ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ 50% ಮಿತಿಗಿಂತ ಹೆಚ್ಚಿನ ಮೀಸಲಾತಿ ಪ್ರಮಾಣವನ್ನು ಕರ್ನಾಟಕದಲ್ಲಿ 56% ಕ್ಕೆ ನೀಡುತ್ತದೆ.

ಬೊಮ್ಮಾಯಿ.ಅವರು ಮಾತನಾಡಿ, ಆಯೋಗದ ವರದಿ ಬಂದ ನಂತರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ನಿರ್ಧರಿಸಲಾಗುವುದು. “ಯಾವುದೇ ಸಮುದಾಯವನ್ನು ಮೀಸಲಾತಿಯಿಂದ ಹೊರತೆಗೆಯಲು ಅಥವಾ ಯಾವುದೇ ಸಮುದಾಯವನ್ನು ಮೀಸಲಾತಿಯ ಅಡಿಯಲ್ಲಿ ಸೇರಿಸುವ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಏಕೆಂದರೆ ಅದು ಸಂವಿಧಾನದ ಪ್ರಕಾರ ಮತ್ತು ಕಾನೂನು ಚೌಕಟ್ಟಿನ ವ್ಯಾಪ್ತಿಯಲ್ಲಿ ನಿರ್ಧರಿಸಬೇಕು. ಮೀಸಲಾತಿ ವಿಚಾರ ಸೂಕ್ಷ್ಮವಾಗಿರುವುದರಿಂದ ರಾಜ್ಯದ ಮುಖ್ಯಸ್ಥನಾಗಿ ನಾನು ಸಂವಿಧಾನ ಮತ್ತು ಕಾನೂನು ಚೌಕಟ್ಟಿಗೆ ಅನುಗುಣವಾಗಿ ಕೆಲಸ ಮಾಡಬೇಕಿದೆ,” ಎಂದಿದ್ದಾರೆ.

ಏತನ್ಮಧ್ಯೆ, ಎಸ್‌ಸಿ/ಎಸ್‌ಟಿ ಸಮುದಾಯದ ಜನರು ಮೀಸಲಾತಿ ಆಧಾರದ ಮೇಲೆ ಉದ್ಯೋಗಗಳನ್ನು ಪಡೆಯುತ್ತಿರುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಡಿಕೆ ಶಿವಕುಮಾರ್ ಹೇಳಿದ್ದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ಆಧಾರದ ಮೇಲೆ ಉದ್ಯೋಗ ಸಿಗಲು ಕಾಂಗ್ರೆಸ್‌ ಕಾರಣ. ಈ ಮೀಸಲಾತಿ ನೀಡುವ ವಿಚಾರವಾಗಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದೆವು. ಸಮಿತಿಯ ವರದಿ ಜಾರಿಗೆ ಕಾಂಗ್ರೆಸ್ ಕೂಡ ಒತ್ತಾಯಿಸಿತ್ತು. ಈ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಪಕ್ಷದ ನಂಬಿಕೆಯಾಗಿದೆ. ಈ ಮೀಸಲಾತಿಗೆ ನಮ್ಮ ಬೆಂಬಲ ವ್ಯಕ್ತಪಡಿಸಿದ್ದೇವೆ ಎಂದರು.

“ಅವರು (ಸಿಎಂ) ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮೀಸಲಾತಿ ಹೆಚ್ಚಿಸುವುದಾಗಿ ಭರವಸೆ ನೀಡಿದ್ದರು, ಆದರೆ ಮಾಡಲಿಲ್ಲ. ಈಗ ಕೊನೆ ಕ್ಷಣದಲ್ಲಿ ಒತ್ತಡದಲ್ಲಿಯೇ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ದಿನವೇ ಮಾಡಬಹುದಿತ್ತು. ಈಗಲೂ ಡಬಲ್ ಇಂಜಿನ್ ಸರ್ಕಾರವಿದೆ. ಆದ್ದರಿಂದ ಸುಗ್ರೀವಾಜ್ಞೆ ಬದಲು ರಾಜ್ಯದಲ್ಲಿ ವಿಶೇಷ ಅಧಿವೇಶನ ಕರೆದು ಚರ್ಚಿಸಿ ಮೀಸಲಾತಿ ಮಂಜೂರಾತಿ ಪಡೆದು ಕೇಂದ್ರ ಸರಕಾರಕ್ಕೆ ಕಳುಹಿಸಿ 9ನೇ ಶೆಡ್ಯೂಲ್ ನಲ್ಲಿ ಸಂವಿಧಾನ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ದಾಖಲೆ ರೂಪದಲ್ಲಿ ತರಬೇಕು. ಸುಗ್ರೀವಾಜ್ಞೆಯೊಂದಿಗೆ ಜನರಿಗೆ ಮರಳು ಮಾಡಲು ಪ್ರಯತ್ನಿಸಬೇಡಿ, ”ಎಂದು ಡಿಕೆಶಿ ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದಾರೆ.

Leave A Reply

Your email address will not be published.