ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್‌ನ ಹಳೆಯ ತಂತ್ರ : ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಹಿಮಾಚಲ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಿಮಾಚಲ ಪ್ರದೇಶದ ಮಂಡಿಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ” ಸುಳ್ಳು ಭರವಸೆ ನೀಡುವುದು, ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್‌ನ ಹಳೆಯ ತಂತ್ರವಾಗಿದೆ ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ

ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಸುಳ್ಳು ಭರವಸೆಗಳನ್ನು ನೀಡುವುದು, ಕಾಂಗ್ರೆಸ್‌ನ ಹಳೆಯ ತಂತ್ರವಾಗಿದೆ. ರೈತರ ಸಾಲ ಮನ್ನಾ ಹೆಸರಿನಲ್ಲಿ ಕಾಂಗ್ರೆಸ್ ಹೇಗೆ ಸುಳ್ಳು ಹೇಳುತ್ತಿದೆ ಎಂಬುದಕ್ಕೆ ಇಡೀ ದೇಶವೇ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಎಂದಿಗೂ ಆದ್ಯತೆ ನೀಡಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಬಿಜೆಪಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಅವರು ಮಂಡಿಯಲ್ಲಿ ಸಾರ್ವಜನಿಕ ಭಾಷಣ ಮಾಡುವ ಮುನ್ನ ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು.

Leave A Reply

Your email address will not be published.