BIGG NEWS : ಕೆಲಸಕ್ಕೆ ಕುತ್ತು ತಂದ ʼ ವಾಟ್ಸಪ್‌ ಸ್ಟೇಟಸ್ ʼ  ರಾಜ್ಯ ಸರ್ಕಾರದ ವಿರುದ್ಧ ಹಾಕಿದ್ದ ಪಂಚಾಯಿತಿ ಕ್ಲರ್ಕ್​ ಸಸ್ಪೆಂಡ್

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಪಂಚಾಯಿತಿ ಕ್ಲರ್ಕ್​ ಒಬ್ಬರನ್ನು ಸರ್ಕಾರ ಅಮಾನತು ಮಾಡಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್​ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ರಾಯಪ್ಪ ಎಂಬುವವರನ್ನು ಸಸ್ಪೆಂಡ್​ ಮಾಡಲಾಗಿದೆ. ಕ್ಲರ್ಕ್​ ರಾಯಪ್ಪ ಸರ್ಕಾರದ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು.

ಈ ಬಗ್ಗೆ ದೇವದುರ್ಗ ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಸಮಂಜಸ ಉತ್ತರ ನೀಡದ ಹಿನ್ನೆಲೆ ಕ್ಲರ್ಕ್​ ಅಮಾನತು ಮಾಡಿ, ಜಾಲಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ್​ ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.