Ration Card : ಪಡಿತರ ಚೀಟಿದಾರರೇ ಗಮನಿಸಿ, 30 ದಿನದಲ್ಲಿ ಈ ಕೆಲಸ ಮಾಡಿ – ಕೇಂದ್ರ ಸರಕಾರದಿಂದ ಸೂಚನೆ!

ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಒಟ್ಟಿನಲ್ಲಿ ಸರ್ಕಾರವು ಜನತೆಯ ಏಳಿಗೆಗಾಗಿ ಶ್ರಮಿಸುತ್ತಲೇ ಇದೆ. ಬಡವರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರ ಹರ ಸಾಹಸ ಪಡುತ್ತಿದೆ.

ಈ ಕುರಿತು ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನು ಹೊರಡಿಸಿದೆ. ನೀವು ಸಹ ಪಡಿತರ ಸೌಲಭ್ಯವನ್ನು ಕೊಳ್ಳುತ್ತಿದ್ದಾರೆ. ನೀವು ಖಂಡಿತವಾಗಿಯೂ ಹೊಸ ನಿಯಮಗಳನ್ನು ತಿಳಿಯಬೇಕು.

ಕರೋನಾ ಸಾಂಕ್ರಾಮಿಕ ರೋಗದ ಸಮಯದ ನಂತರ ಕೇಂದ್ರ ಸರ್ಕಾರವು ಬಡವರಿಗೆ ಉಚಿತ ಪಡಿತರ ಸೌಲಭ್ಯವನ್ನು ಒದಗಿಸುತ್ತಿದೆ. ಈಗ ಕೆಲವು ಅನರ್ಹರು ಸಹ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಈಗ ಸರ್ಕಾರವು ಅನರ್ಹರನ್ನು ಪಟ್ಟಿಯಿಂದ ತೆಗೆದುಹಾಕಲು ಹೊಸ ನಿಯಮಗಳನ್ನು ಹೊರಡಿಸಿದೆ.

ಕೇಂದ್ರ ಸರ್ಕಾರ ನೀಡಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಸರ್ಕಾರದಿಂದ ಪಡೆದ ಉಚಿತ ಪಡಿತರದ ಲಾಭವನ್ನು ಪಡೆಯುವವರು ತಮ್ಮ ಪರಿಶೀಲನೆಯನ್ನು ಮಾಡಬೇಕಾಗುತ್ತದೆ. ಪರಿಶೀಲನೆಯಲ್ಲಿ ಯಾವುದೇ ಫಲಾನುಭವಿ ಅನರ್ಹ ಎಂದು ಕಂಡುಬಂದರೆ, ಅವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ. ಈ ಕುರಿತು ಪಡಿತರ ಚೀಟಿದಾರರಿಗೆ ಸರ್ಕಾರವು ಪರಿಶೀಲನೆಗಾಗಿ 30 ದಿನಗಳ ಕಾಲಾವಕಾಶ ನೀಡಿದೆ.

ಪ್ರಸ್ತುತ ಫಲಾನುಭವಿಯು ಹೊಸ ಸೂಚನೆಗಳನ್ನು ಅನುಸರಿಸರಿಸದೆ ಇದ್ದರೆ ಅಂತಹ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಷರತ್ತು ಬದ್ಧ ಆದೇಶ ಹೊರಡಿಸಿದೆ.

Leave A Reply

Your email address will not be published.