ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಭಕ್ತರಿಗೆ ಪ್ರತ್ಯೇಕ ಅನ್ನಪ್ರಸಾದ ವ್ಯವಸ್ಥೆಗೆ ಚಾಲನೆ

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮಾಲಾಧಾರಿ ಅಯ್ಯಪ್ಪ ವೃತಧಾರಿಗಳಿಗೆ ಪ್ರತ್ಯೇಕ ಅನ್ನಪ್ರಸಾದ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ ನಾರಾವಿಯವರು ಅನ್ನಪ್ರಸಾದ ಬಡಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪುತ್ತೂರು ಅಯ್ಯಪ್ಪ ಭಕ್ತ ಸಮಿತಿಯ ಲೋಕೇಶ ಹೆಗ್ಡೆಯವರು ಸ್ವಾಗತಿಸಿ, ಶ್ರೀ ಮಹಾಲಿಂಗೇಶ್ವರ ದೇವರ ಈ ಅನ್ನಪ್ರಸಾದವು ಮಕರವಿಳಕ್ ತನಕ ಅಂದರೆ ಜನವರಿ 14 ರತನಕ ಇರುತ್ತದೆ ಎಂದು ಹೇಳಿ ಇದರ ಸದುಪಯೋಗವನ್ನು ಎಲ್ಲಾ ಮಾಲಾಧಾರಿ ಅಯ್ಯಪ್ಪ ಸ್ವಾಮಿಗಳು ಪಡೆದು ಕೊಳ್ಳಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಮಾಧವ ಸ್ವಾಮಿಯವರು ಉಪಸ್ಥಿತರಿದ್ದು, ಅನ್ನಪ್ರಸಾದದ ವ್ಯವಸ್ಥೆ ಮಾಡಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮತ್ತು ಸದಸ್ಯರಿಗೆ ವಂದಿಸಿದರು.

Leave A Reply

Your email address will not be published.