ಕುಕ್ಕರ್ ಬಾಂಬ್ ಸ್ಫೋಟ: ಎನ್‌ಐ ಎ ತನಿಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟವನ್ನು ಎನ್ ಐ ಎ ( ರಾಷ್ಟ್ರೀಯ ತನಿಖಾ ದಳ) ಕ್ಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಈ ಕುರಿತಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆ ನೀಡಿದ್ದು, ಮಂಗಳೂರು, ಕಂಕನಾಡಿ ಸಮೀಪ, ಇತ್ತೀಚೆಗೆ ನಡೆದ ಕುಕ್ಕರ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ, ಮುಂದಿನ ತನಿಖೆಯನ್ನು, ಕೇಂದ್ರ ತನಿಖಾ ಸಂಸ್ಥೆ NIA ಗೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿ ಆಜ್ಞೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆ ಯಲ್ಲಿ, ಸಂಗ್ರಹಿಸಲಾದ, ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು, UAPA ಕಾಯಿದೆ ಅನ್ವಯ ತನಿಖೆಯನ್ನು ನಡೆಸಲು, ಶಿಫಾರಸು ಮಾಡಲಾಗಿದೆ.

Leave A Reply

Your email address will not be published.