ಕಾಫಿನಾಡಿನಲ್ಲಿ ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ | ಭಕ್ತರಿಂದ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಸಂಚು ನಡೆದಿದೆ. ಈ ಬಗ್ಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದರ್ಶನಕ್ಕೆ ಅಡ್ಡಿಪಡಿಸಲು, ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿತ್ತು ಎಂದು ತಿಳಿದುಬಂದಿದೆ. ವಾಹನಗಳು ಮೊಳೆಗಳಿಗೆ ಸಿಕ್ಕಿ ಅಪಘಾತವಾಗಬೇಕು ಎಂದು ಕಿಡಿಗೇಡಿಗಳು ಈ ಸಂಚು ರೂಪಿಸಿದ್ದರು ಎನ್ನಲಾಗಿದೆ.

ಇನ್ನೂ ಈ ಮೊಳೆಗಳನ್ನು ಕೈಮರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಹಾಕಲಾಗಿತ್ತು. ಕಿಡಿಕೇಡಿಗಳ ಈ ಕೃತ್ಯಕ್ಕೆ ಶಾಸಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.