ಹಾಸ್ಟೆಲ್‌ನ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ಆರೋಪ : ಪ್ರಾಂಶುಪಾಲ ಅರೆಸ್ಟ್‌

ಹಾಸನ : ಜಿಲ್ಲೆ, ಅರಕಲಗೂಡು ತಾಲೂಕಿನಲ್ಲಿ ಹಾಸ್ಟೆಲ್‌ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾದ ದುರಂತ ಘಟನೆ ಬೆಳಕಿಗೆ ಬಂದಿದೆ
ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದ ಬೆನ್ನಲ್ಲೆ ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ, ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದರು. ನಂತರ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ್ವಯ ಪೊಲೀಸರು ಪ್ರಾಂಶುಪಾಲ ಶಿವಕುಮಾರ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಾಂಶುಪಾಲ ಶಿವಕುಮಾರ್ ಮೂಲತಃ ಕೊಡಗು ಜಿಲ್ಲೆಯವನಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave A Reply

Your email address will not be published.