RRR ನಿರ್ದೇಶಕ ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ ಟೀಮ್ ? : ರಾಮ್ ಗೋಪಾಲ ವರ್ಮ ಟ್ವೀಟ್ !

ರಾಜಮೌಳಿ ಅವರೇ ನೀವು ಜಾಗ್ರತರಾಗಿರಿ, ದಯವಿಟ್ಟು ನಿಮ್ಮ ಭದ್ರತೆಯನ್ನು ಹೆಚ್ಚಿಸಿಕೊಳ್ಳಿ. ನಿಮಗೆ ಅಪಾಯ ಕಾದಿದೆ. ಅನೇಕರು ನಿಮ್ಮ ಮೇಲೆ ಅಸೂಯೆ ಪಡುತ್ತಿದ್ದಾರೆ. ನಿಮ್ಮನ್ನು ಕೊಲ್ಲಲೆಂದೇ ನಿರ್ದೇಶಕರು ಒಂದು ಗುಂಪನ್ನಾಗಿ ಮಾಡಿಕೊಂಡಿದ್ದಾರೆ. ಆ ಗುಂಪಿನಲ್ಲಿ ನಾನೂ ಇದ್ದೇನೆ. ಇದೀಗ ನಾನು ನಾಲ್ಕು ಪೆಗ್‍ ತಗೆದುಕೊಂಡಿದ್ದೇನೆ ಹಾಗಾಗಿ ಸತ್ಯ ನುಡಿಯುತ್ತಿದ್ದೇನೆ ಎಂದು ಹೇಳುವ ಮೂಲಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ರಾಜಮೌಳಿ ಅಭಿಮಾನಿಗಳನ್ನು ದಂಗಾಗಿಸಿರುವ ಘಟನೆ ನಡೆದಿದೆ!

ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಇದ್ದಲ್ಲಿ ಕಾಂಟ್ರವರ್ಸಿ ಸಹಜ. ಒಂದಿಲ್ಲೊಂದು ವಿಚಾರದಲ್ಲಿ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ರಾಜಮೌಳಿ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದಾರೆ. ಅವರು ಮಾಡಿರುವ ‘ರಾಜಮೌಳಿ ಅವರೇ, ದಯವಿಟ್ಟು ಭದ್ರತೆ ಹೆಚ್ಚಿಸಿಕೊಳ್ಳಿ. ನಿಮ್ಮನ್ನು ಹತ್ಯೆ ಮಾಡಲು ತಂಡ ರಚಿಸಿಕೊಳ್ಳಲಾಗಿದೆ’ ಎಂಬ ಟ್ವೀಟ್​ ಅನ್ನು ಒಮ್ಮೆಲೆ ನೋಡಿದರೆ ಎಂತವರಿಗೂ ಕೂಡ ಶಾಕ್ ಆಗುವಂತಹ ವಿಚಾರ ಇದಾಗಿದೆ.

ಆದರೆ ಇದು ತಮಾಷೆಗಾಗಿ! ‘ರಾಜಮೌಳಿ ಅವರ ಹತ್ಯೆ ನಡೆಸಲು ತಂಡ ಸಿದ್ಧವಾಗಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್ ಮಾಡಿದ್ದಾರೆ. ಆ ತಂಡದಲ್ಲಿ ತಾವೂ ಇರುವುದಾಗಿ ಅವರು ತಿಳಿಸಿದ್ದಾರೆ. ಇದೆಲ್ಲವನ್ನೂ ಅವರು ತಮಾಷೆಗಾಗಿ ಹೇಳಿದ್ದು ಅಂತ ಗೊತ್ತಾದ ತಕ್ಷಣ ರಾಜಮೌಳಿ ಅಭಿಮಾನಿಗಳು ಸಮಾಧಾನಗೊಂಡಿದ್ದಾರೆ. ರಾಮ್​ ಗೋಪಾಲ್​ ವರ್ಮಾ ಮಾಡಿದ ಈ ಟ್ವೀಟ್​ ಮಾತ್ರ ವೈರಲ್​ ಆಗಿದೆ.

ಸರಣಿಯ ಟ್ವೀಟ್ ನಲ್ಲಿ ರಾಜಮೌಳಿಯನ್ನು ಹೊಗಳಿರುವ ವರ್ಮಾ, ಅವರನ್ನು ದಾದಾ ಸಾಹೇಬ್ ಫಾಲ್ಕೆಗೆ ಹೋಲಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ದಿಗ್ಗಜ ನಿರ್ದೇಶಕರನ್ನೂ ದಾಟಿಕೊಂಡು ಮುಂದೆ ಹೋಗಿದ್ದೀರಿ ಎಂದಿದ್ದಾರೆ. ಈ ಸ್ಥಾನದಲ್ಲಿ ನೀವು ಇರುತ್ತೀರಿ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಅಚ್ಚರಿಯನ್ನೂ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ನಿಮ್ಮ ಕಿರುಬೆರಳನ್ನು ಒಂದು ಸಲ ಚೀಪಬೇಕು ಎಂದು ಯತ್ವಾತದ್ವಾ ಹೊಗಳಿದ್ದಾರೆ ರಾಮ್ ಗೋಪಾಲ್ ವರ್ಮಾ.

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳಿಂದಾಗಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ‘ಗೋಲ್ಡನ್​ ಗ್ಲೋಬ್​ 2023’ ಅವಾರ್ಡ್​ ಪಡೆದುಕೊಂಡ ನಂತರ ಬೇರೆ ಬೇರೆ ದೇಶಗಳ ಜನರು ತೆಲುಗು ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಇಷ್ಟೆಲ್ಲ ಜನಪ್ರಿಯತೆ ಸಿಕ್ಕಿರುವುದರಿಂದ ಕೆಲವು ನಿರ್ದೇಶಕರಿಗೆ ಹೊಟ್ಟೆಕಿಚ್ಚು ಆಗಿದೆಯಂತೆ. ಆದ್ದರಿಂದಲೇ ರಾಜಮೌಳಿ ಅವರನ್ನು ಹತ್ಯೆ ಮಾಡುವ ಸಂಚು ನಡೆದಿದೆ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದಾರೆ.

Leave A Reply

Your email address will not be published.