ಕಾರ್ಕಳ : ತಮ್ಮನ ಮನೆಗೆ ಬೆಂಕಿಯಿಟ್ಟು ಕಾರಿನೊಳಗೆ ಭಸ್ಮವಾದ ಅಣ್ಣ

ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಬರ್ಬರ ಕೃತ್ಯ.ತಮ್ಮನ ಮನೆಗೆ ಕೊಳ್ಳಿಯಿಟ್ಟು ತಾನೂ ಭಸ್ಮವಾದ.ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಎಂಬಾತ ತನ್ನ ತಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾದ.ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ.ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗಿತ್ತಿದೆ.ಅಗ್ನಿಶಾಮಕ ದಳದವರ ಸಹಿತ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.