IND vs NZ ಮೊದಲ ಪಂದ್ಯದಲ್ಲಿ ಆಘಾತಕಾರಿ ಬದಲಾವಣೆ ಮಾಡಿದ ಕ್ಯಾಪ್ಟನ್ ಪಾಂಡ್ಯ!

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಮೂರು ಪಂದ್ಯಗಳಲ್ಲಿ ಟಿ20 ಸರಣಿಯ ಮೊದಲ ಪಂದ್ಯ ನಾಳೆ ರಾತ್ರಿ 7:00 ರಿಂದ ರಾಂಚಿಯಲ್ಲಿ ನಡೆಯಲಿದ್ದು, ಭಾರತವು ನ್ಯೂಜಿಲೆಂಡ್ ವಿರುದ್ಧದ ಈ ಟಿ20 ಸರಣಿಯಿಂದ ನಡೆಯಲಿರುವ ಟಿ20 ವಿಶ್ವಕಪ್‌ಗೆ ತನ್ನ ಆರಂಭಿಕ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಭಾರತದ ಟಿ20 ತಂಡವನ್ನು ಮತ್ತೆ ಬದಲಾವಣೆ ಮಾಡಲಾಗಿದ್ದು, ಇದರಲ್ಲಿ ಹಲವು ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ತಂಡದಲ್ಲಿಲ್ಲ. ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಅವರಂತಹ ಆಟಗಾರರ ಮೇಲೆ ಟೀಂ ಇಂಡಿಯಾದ ಶಕ್ತಿ ಅವಲಂಬಿತವಾಗಿದೆ. ಹಾಗೇ ಈ ಆಟಗಾರರು ಫೆಬ್ರವರಿ 2 ರಂದು ನಾಗ್ಪುರದಲ್ಲಿ ನಡೆಯಲಿರುವ ತರಬೇತಿಯಲ್ಲಿ ಪಾಲ್ಗೊಂಡು ಟೆಸ್ಟ್ ಸರಣಿಗೆ ತಯಾರಿ ನಡೆಸಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ODI ಸರಣಿಯಲ್ಲಿ ಸೂರ್ಯಕುಮಾರ್ ಉತ್ತಮ ಪ್ರದರ್ಶನ ನೀಡಲಾಗಲಿಲ್ಲ. ಆದರೆ ಟಿ20 ಗೆ ಬಂದಾಗ, ಅವರು ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಹಾಗೇ ಗಾಯದಿಂದ ಹಿಂತಿರುಗಿದ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲಾಗಲಿಲ್ಲ. ಅವರು ಪುಣೆಯಲ್ಲಿ ಎರಡು ಓವರ್‌ಗಳಲ್ಲಿ 37 ರನ್ ನೀಡಿದರು. ಈ ಪಂದ್ಯದಲ್ಲಿ ಭಾರತ ಸೋತಿತ್ತು. ಯುವ ವೇಗದ ಬೌಲರ್ ಶಿವಂ ಮಾವಿ ಚೊಚ್ಚಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ನೀಡಿ, 22 ರನ್‌ಗಳಿಗೆ ನಾಲ್ಕು ವಿಕೆಟ್ ಪಡೆದರು.

ಕೊನೆಯ ODIನಲ್ಲಿ, ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಾಲ್ ಒಟ್ಟಿಗೆ ಆಡುವ ಅವಕಾಶವನ್ನು ಪಡೆದರು. ಆದರೆ ಅವರಲ್ಲಿ ಒಬ್ಬರು ಮಾತ್ರ ಟಿ20 ನಲ್ಲಿ ಆಡುವ 11 ರಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಭಾರತ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತ್ತು . ಆದರೆ ಟಿ 20 ನಲ್ಲಿ, ಮಿಚೆಲ್ ಸ್ಯಾಂಟ್ನರ್ ನೇತೃತ್ವದ ಕಿವೀಸ್ ತಂಡವು ಮತ್ತೆ ಆಗಮಿಸಲು ಪ್ರಯತ್ನಿಸುತ್ತಿದೆ. ಎಡಗೈ ಬ್ಯಾಟ್ಸ್‌ಮನ್ ಡೆವೊನ್ ಕಾನ್ವೆ ಅಂತಿಮ ODIನಲ್ಲಿ 138 ರನ್ ಗಳಿಸಿದರು. ಆದರೆ ಮೈಕೆಲ್ ಬ್ರೇಸ್‌ವೆಲ್ ಉತ್ತಮ ಪ್ರದರ್ಶನವನ್ನು ಮುಂದುವರೆಸಿದರು. ಹಾಗೇ ಟಿ20ಯಲ್ಲೂ ಇದೇ ಫಾರ್ಮ್ ಅನ್ನು ಕಾಯ್ದುಕೊಳ್ಳಲಿದ್ದಾರೆ.

Leave A Reply

Your email address will not be published.