ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ !

Share the Article

ಬಡವರ ಮಕ್ಕಳ ಶಿಕ್ಷಣದಲ್ಲಿ ಸಿಎಂ ಕ್ರಾಂತಿಕಾರಿ ಹೆಜ್ಜೆ ಇಟ್ಟಿದ್ದಾರೆ. ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಳಪಡುವ ಪ್ರೌಢಶಾಲಾ ಮಟ್ಟದ ವಸತಿ ಶಾಲೆಗಳಲ್ಲಿ ಪಿಯುಸಿ ಪ್ರಾರಂಭಿಸಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ‌ಸಮ್ಮತಿ ನೀಡಿದ್ದಾರೆ.

ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ನಡೆದ ವಸತಿ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ಮೇಳದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯಮಂತ್ರಿಗಳು ಈ ವೇಳೆ ಪ್ರೌಢಶಾಲಾ ಮಟ್ಟದ ವಸತಿ ಶಾಲೆಗಳಲ್ಲಿ ಪಿಯುಸಿ ಪ್ರಾರಂಭಿಸಲು ಘೋಷಣೆ ಮಾಡಿದ್ದಾರೆ.

ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದು, ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಇನ್ನು ಈ ಬಗ್ಗೆ ಸಚಿವರು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿಗಳ ಮಾರ್ಗದರ್ಶನದಂತೆ ರಾಜ್ಯದಲ್ಲಿ ನಮ್ಮ ಇಲಾಖೆಗೆ ಅಂದ್ರೆ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಳಪಡುವ ಸುಮಾರು 600 ವಸತಿ ಶಾಲೆಗಳನ್ನು ಎಸ್.ಎಸ್.ಎಲ್.ಸಿ.ಯಿಂದ ಪಿಯುಸಿಗೆ ಮೇಲ್ದರ್ಜೆಗೇರಿಸಲು ಅವಕಾಶ ಇದೆ. ಇದರಿಂದ 30,000 ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ಪ್ರಥಮ ವರ್ಷವೇ ಸೇರ್ಪಡೆ ಆಗುತ್ತಾರೆ. ಬಡವರ ಮಕ್ಕಳ ಶಿಕ್ಷಣದಲ್ಲಿ ಇದೊಂದು ಕ್ರಾಂತಿಕಾರಿ ಆಗಲಿದೆ. ಈ ಪ್ರಕ್ರಿಯೆಗೆ ಮುಂದಿನ ವರ್ಷವೇ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Leave A Reply