Mangalore crime news: ಮಂಗಳೂರು: ಹಾಡಹಗಲೇ ಯುವಕನಿಗೆ ಚೂರಿ ಇರಿತ!!

Mangalore Crime News : ದಕ್ಷಿಣ ಕನ್ನಡ: ಹಾಡಹಗಲೇ ಯುವಕನ ಮೇಲೆ ಚೂರಿ ಇರಿತದ ಘಟನೆಯೊಂದು ನಡೆದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪ ಈ ಘಟನೆ ನಡೆದಿದೆ.

ನೆಹರು ನಗರ ನಿವಾಸಿ ಸುಲೈಮಾನ್ ಎಂಬ ಯುವಕನೇ ಚೂರಿ ಇರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಫೆ.18 ರ ಶನಿವಾರ ಮಧ್ಯಾಹ್ನ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಸುಲೈಮಾನ್ ಹಾಗೂ ಆತನ ಗೆಳೆಯ ನಿಸಾರ್ ಎಂಬಾತನ ಮಧ್ಯೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದಿದ್ದು, ಜಗಳ ತಾರಕಕ್ಕೇರುತ್ತಿದ್ದಂತೆ ನಿಸಾರ್ ಸುಲೈಮಾನ್ ಗೆ ಚೂರಿಯಿಂದ ತಿವಿದಿದ್ದಾನೆ ಎನ್ನಲಾಗಿದೆ.

ಈ ಘಟನೆಯ ನಂತರ ಆರೋಪಿಗಳು ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಸುಲೈಮಾನ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ.  ಮಂಗಳೂರಿನಲ್ಲಿ ( Mangalore Crime News) ಇತ್ತೀಚೆಗೆ ಅಹಿತಕರ ಘಟನೆಗಳು ನಡೆಯುತ್ತಿರುವುದು ಜನರಲ್ಲಿ ಆತಂಕಕ್ಕೀಡು ಮಾಡಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.