Bangalore-Mysore Highway: ಲೋಕಾರ್ಪಣೆ ದಿನವೇ ಮೈಸೂರು – ಬೆಂಗಳೂರು ನೂತನ ಎಕ್ಸ್​ಪ್ರೆಸ್​​ ಹೈವೇನಲ್ಲಿ ಭೀಕರ ಅಪಘಾತ

Bangalore-Mysore Highway :ಇಂದು ಬಹುನಿರೀಕ್ಷಿತ ಮೈಸೂರು- ಬೆಂಗಳೂರು(Bangalore-Mysore Highway) ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ(PM Modi)ಯವರು ಉದ್ಘಾಟನೆ ಮಾಡಿದ್ದಾರೆ. ಆದರೆ ವಿಪರ್ಯಾಸವೆಂದರೆ ಲೋಕಾರ್ಪಣೆಯಾದ ದಿನವೇ ಈ ನೂತನ ಎಕ್ಸ್​ಪ್ರೆಸ್​​ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಹೌದು, ಮಂಡ್ಯ(Mandya) ಜಿಲ್ಲೆ ಮದ್ದೂರಿನ(Maddur) ಎಕ್ಸ್​ಪ್ರೆಸ್​​ ಹೈವೇ ಫ್ಲೈ ಓವರ್ ಬಳಿ ಕಾರು ಪಲ್ಟಿಯಾಗಿದೆ. ಇದು ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿವೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಈಗಾಗಲೇ ಕೆಲವು ದಿನಗಳಿಂದ ಈ ಹೈವೇ ವಿಚಾರವಾಗಿ ರಾಜಕೀಯ ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಶುರುವಾಗಿತ್ತು. ‘ಶ್ರೇಯಸ್ಸು ಸಿಂಹಕ್ಕೆ ಸೇರಬೇಕೆ ಹೊರತು ನರಿಗಲ್ಲ’ ಎಂಬ ಪೋಸ್ಟ್ ಗಳು ಸುದ್ಧಿಮಾಡಿದ್ದವು. ಇದರ ನಡುವೆ ಈ ದಶಪಥ ಹೆದ್ದಾರಿಯನ್ನು ಅವೈಜ್ಞಾನಿಕವಾಗಿ ಮಾಡಲಾಗಿದೆ. ಈಗಾಗಲೇ ಸಾಕಷ್ಟು ಅಪಘಾತಗಳು ಸಂಭವಿಸಿದೆ. ಇದು ಹೈವೇ ರೋಡ್ ಅಲ್ಲ ಕಿಲ್ಲರ್ ರೋಡ್ ಎಂಬ ಟೀಕೆಗಳು ಆಗಾಗ ಕೇಳಿಬರುತ್ತಿದ್ದವು. ಇದರ ಬೆನ್ನಲೇ ಈ ಹೆದ್ದಾರಿ ಸಂಚಾರಕ್ಕೆ ಮುಕ್ತವಾದ ಕೂಡಲೇ ಅಪಘಾತ ಸಂಭವಿಸಿರೋದು ಕಾಕತಾಳೀಯ ಎನಿಸಿದೆ.

ಇನ್ನು ಈ ಯೋಜನೆಯು ರಾಷ್ಟ್ರೀಯ ಹೆದ್ದಾರಿ-275ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ 6-ಪಥವನ್ನು ಒಳಗೊಂಡಿದೆ. 118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳಿಗೆ ಇಳಿಸಿದೆ.

Leave A Reply

Your email address will not be published.