Siddaramaiah: ಕೋಲಾರ ಅಲ್ಲ, ವರುಣಾನೂ ಅಲ್ಲ! ಸಿದ್ದರಾಮಯ್ಯ ಸ್ಪರ್ಧೆಗೆ ಸಜ್ಜಾಗ್ತಿದೆ ಈ ಕ್ಷೇತ್ರ: ಯಾವುದು ಹಾಗಾದ್ರೆ ಸಿದ್ದು ಸೆಳೆದ ಆ ಅಕಾಡ?

Assembly election 2023 : ಚುನಾವಣೆ (Assembly election 2023) ಹತ್ತಿರವಾದರೂ ಕಾಂಗ್ರೆಸ್ ನ ಪ್ರಮುಖ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ಈ ಕುರಿತು ಸ್ವತಃ ಸಿದ್ದು ಗೆ ಸ್ಪಷ್ಟತೆ ಇಲ್ಲ. ಕೋಲಾರ ಹಾಗೂ ವರುಣಾ ಕ್ಷೇತ್ರಗಳೇ ಅವರಿಗೆ ಗೊಂದಲವಾಗಿ ಬಿಟ್ಟಿದೆ. ಆದರೆ ಇದರ ಬೆನ್ನಲ್ಲೆ ಸಿದ್ದರಾಮಯ್ಯ ಈ ಎರಡೂ ಕ್ಷೇತ್ರಗಳನ್ನು ಪಕ್ಕಕ್ಕಿಟ್ಟು ತಮ್ಮ ಹಾಲಿ ಕ್ಷೇತ್ರವಾದ ಬಾದಾಮಿಯಲ್ಲೇ (Badami) ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ?

ಹೌದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಸ್ಪರ್ಧಾ ಕಣದಿಂದ ಹಿಂದೆ ಸರಿದ ಬೆನ್ನಲ್ಲೇ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಕುರಿತು ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮತ್ತೆ ವರುಣಾಗೆ ಹೋಗ್ತಾರೆ ಎಂಬ ಮಾತುಗಳ ನಡುವೆಯೇ ಸಿದ್ದು ತಮ್ಮ ಹಾಲಿ ಕ್ಷೇತ್ರ ಬಾದಾಮಿಯಿಂದಲೇ ಕಣಕ್ಕಿಳಿಯುತ್ತಾರಾ? ಎಂಬ ಪ್ರಶ್ನೆ ಎದ್ದಿದ್ದು, ಸಿದ್ದು ನಡೆ ಕೂಡ ಅನುಮಾನ ಮೂಡಿಸಿದೆ. ಯಾಕೆಂದರೆ ಕೋಲಾರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಗೊಂದಲವಿರುವ ನಡುವೆಯೇ ಸಿದ್ದರಾಮಯ್ಯ ಇದೀಗ ಬಾದಾಮಿ ಪ್ರವಾಸಕ್ಕೆ ಮುಂದಾಗುತ್ತಿದ್ದಾರೆ.

ಇಂದು ಶುಕ್ರವಾರ ಬಾದಾಮಿಗೆ ತೆರಳಲಿರುವ ಸಿದ್ದರಾಮಯ್ಯ ಅಲ್ಲಿ 500 ಕೋಟಿ ರೂ. ವೆಚ್ಚದ ಬಾದಾಮಿ-ಕೆರೂರು ಶಾಶ್ವತ ಕುಡಿಯವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಹಾಗೆ ಸ್ವಕ್ಷೇತ್ರದಲ್ಲಿ ನಡೆಯಲಿರಯವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಬಾಗಿಯಾಗುವುದರಲ್ಲಿ ಯಾವುದೇ ವಿಶೇಷ ಇಲ್ಲ. ಆದರೆ ಈ ಕಾರ್ಯಕ್ರಮದ ಬಳಿಕ ರೋಡ್ ಶೋ (Road Show) ನಡೆಸಲಿದ್ದಾರೆ. ಈ ರೋಡ್ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

ಭರ್ಜರಿ ರೋಡ್ ಶೋಗೆ ಸಿದ್ಧತೆಗಳನ್ನು ಮಾಡಲಾಗಿದ್ದು, ಸಿದ್ದರಾಮಯ್ಯ ಅವರ ಈ ನಡೆ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸುತ್ತಿದೆ. ಬಾದಾಮಿ ನಗರದ ರಾಮದುರ್ಗ ಕ್ರಾಸ್‌ನಿಂದ ಎಪಿಎಂಸಿ ಆವರಣದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಪರೋಕ್ಷವಾಗಿ ಬಾದಾಮಿ ಮತದಾರರ ಮನಸ್ಥಿತಿ ಅಳೆಯಲು ಅವರು ಮುಂದಾಗಿದ್ದಾರಾ ಎಂಬ ಅನುಮಾನಗಳೂ ವ್ಯಕ್ತವಾಗಿವೆ.

ಅಲ್ಲದೆ ಈ ಹಿಂದೆ ಅಂದರೆ ಕೋಲಾರದಲ್ಲಿ ಸ್ಪರ್ಧೆಮಾಡುತ್ತೇನೆಂದು ಘೋಷಣೆ ಮಾಡೋ ಮೊದಲು ತಾವು ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ಬಾರಿ ನಾನು ಬಾದಾಮಿಯಿಂದ ಸ್ಪರ್ಧೆ ಮಾಡುವುದಿಲ್ಲ. ಬೆಂಗಳೂರಿನಿಂದ ಬಾದಾಮಿ ಬಹಳ ದೂರದಲ್ಲಿದೆ. ಬೆಂಗಳೂರು ಹತ್ತಿರದಲ್ಲಿರುವ ಕ್ಷೇತ್ರದಲ್ಲಿ ಈ ಬಾರಿ ನಿಲ್ಲುತ್ತೇನೆ. ಹೀಗಾಗಿ ವರುಣಾ ಇಲ್ಲವೇ ಕೋಲಾರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದರು.

ಬಳಿಕ ಈ ಬಾರಿ ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಬಹಿರಂಗವಾಗಿ ಘೋಷಣೆ ಮಾಡಿದ್ದ ಸಿದ್ದರಾಮಯ್ಯಗೆ ಹೈಕಮಾಂಡ್ ಅಲ್ಲಿಂದ ಸ್ಪರ್ಧೆ ಬೇಡ, ಗೆಲುವು ಕಷ್ಟ ಸಾಧ್ಯ ಎಂದಿತ್ತು. ಈ ಹಿನ್ನೆಲೆಯಲ್ಲಿ ವರುಣಾದಲ್ಲಿ ಕಣಕ್ಕಿಳಿಯಲು ಚಿಂತಿಸಿದ್ದರು. ಆದರೆ ಮತ್ತೆ ಸಿಎಂ ಆಗಬೇಕೆಂದು ಕನಸು ಕಾಣುತ್ತಿರುವ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಗೊಂದಲಕ್ಕೆ ಒಳಗಾಗಿದ್ದಾರೆ. ಇದರ ನಡುವೆಯೇ ಹಲವು ಕ್ಷೇತ್ರಗಳಿಂದ ಅವರಿಗೆ ಆಹ್ವಾನಗಳೂ ಬರತೊಡಗಿವೆ. ಅಲ್ಲದೆ ತೀವ್ರ ಗೊಂದಲಕ್ಕೊಳಗಾಗಿರುವ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ತಮ್ಮ ಹೆಂಡತಿ ಹಾಗೂ ಮಗನ ಸಲಹೆಯನ್ನೂ ಪಡೆದಿದ್ದಾರೆ.

ಇದನ್ನೂ ಓದಿ: Bank : ಗ್ರಾಹಕರೇ ಗಮನಿಸಿ, ಮಾರ್ಚ್ 31 ಭಾನುವಾರ ಬ್ಯಾಂಕ್ ರಜೆ ಇಲ್ಲ! ಕಾರಣ ಇಲ್ಲಿದೆ!!!

Leave A Reply

Your email address will not be published.