Kerala: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಕಿರಾತಕ !ಮೂವರ ಬಲಿ!!!

Kerala train fire : ಚಲಿಸುತ್ತಿದ್ದ ರೈಲಿನಲ್ಲೇ ಅನಾಮಿಕ ವ್ಯಕ್ತಿ ಒಬ್ಬ ಸಹ ಪ್ರಯಾನಿಕರಿಗೆ ಬೆಂಕಿ ಹಚ್ಚಿದ ಘಟನೆ (Kerala train fire) ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಭವಿಸಿದೆ.

ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತು. ಈ ವೇಳೆ ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಸೀಟಿಗಾಗಿ ಜಗಳವಾಡಿ, ನಂತರ ಆತನಿಗೆ ಬೆಂಕಿ ಹಚ್ಚಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ರೈಲ್ವೆ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈಲು ಕಣ್ಣೂರು ತಲುಪಿದಾಗ, ಘಟನೆಯ ನಂತರ ಮಹಿಳೆ ಮತ್ತು ಮಗು ಕಾಣೆಯಾಗಿದ್ದಾರೆ ಎಂದು ಕೆಲವು ಪ್ರಯಾಣಿಕರು ದೂರಿದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆ ಹಾಗೂ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮಹಿಳೆ, ಮಗು ಹಾಗೂ ಓರ್ವ ವ್ಯಕ್ತಿಯ ಮೃತದೇಹಗಳು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬೆಂಕಿಯನ್ನು ನೋಡಿದ ನಂತರ ಆ ಮೂವರು ರಾಬರಿಗೊಂಡು ತಪ್ಪಿಸಿಕೊಳ್ಳಲು ರೈಲಿನಿಂದ ಇಳಿಯಲು ಪ್ರಯತ್ನಿಸಿ ಬಿದ್ದಿದ್ದಾರೆ ಎಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ.

ಘಟನೆ ಸಂಬಂಧಿಸಿದ ಕೊಂಕಣ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಆರೋಪಿ ತಲೆಮರಿಸಿಕೊಂಡಿದ್ದು ಪೊಲೀಸರು ಬಲೆ ಬೀಸಿದ್ದಾರೆ,

Leave A Reply

Your email address will not be published.