BJP-Congress: BJP, ಕಾಂಗ್ರೆಸ್‌ ಬೆಂಬಲಿಗರ ನಡುವೆ ಹೊಡೆದಾಟ : ಓರ್ವನ 3 ಬೆರಳು ಕಟ್​

BJP-Congress : ರಾಯಚೂರು : ನಗರದ ಅಂದ್ರೂನ್ ಖಿಲ್ಲಾ‌ ಏರಿಯಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ (BJP-Congress) ಬೆಂಬಲಿಗರ ನಡುವೆ ಮಾತಿನ ಚಕಮಕಿ ತೀವ್ರಗೊಂಡು ಹೊಡೆದಾಡಿಕೊಂಡ  ಘಟನೆ ಬೆಳಕಿಗೆ ಬಂದಿದೆ.

ರಾಯಚೂರು ಜಿಲ್ಲೆಯಲ್ಲಿ ಮುಂದಿನ ಚುನಾವಣೆ ವಿಚಾರವಾಗಿ ರಾಜಕೀಯ ನಾಯಕರ ಪರ ವಾದ ಮಂಡಿಸುತ್ತಾ  ಬಿಜೆಪಿ  ಹಾಗೂ ಕಾಂಗ್ರೆಸ್ ನಾಯಕರ ಬೆಂಬಲಿಗರು ಮಾತಿನ ಚಕಮಕಿ ಜೋರಾಗಿದೆ . ಬಿಜೆಪಿ ಶಾಸಕ ಡಾ. ಶಿವರಾಜ್‌ ಪಾಟೀಲ್‌ ಬೆಂಬಲಿಗರ ಆರೀಫ್‌ ಮತ್ತು ಕಾರ್ಪೋರೇಟರ್‌ ತಿಮ್ಮಾರೆಡ್ಡಿ ಆಪ್ತ ಮೊಹಮ್ಮದ್‌ ನಡುವೆ ಗಲಾಟೆ ನಡೆದಿದೆ. ಆರಿಫ್ ಹಾಗೂ ಮೊಹಮ್ಮದ್ ವಾಸಿಮ್ ಗಲಾಟೆ ಮಾಡಿದ ಕಾರ್ಯಕರ್ತರು ಎಂದು ತಿಳಿಯಲಾಗಿದೆ.  ಮೊಹಮ್ಮದ್ ವಾಸಿಮ್ ಕಾಂಗ್ರೆಸ್ ಕೌನ್ಸಿಲರ್​ ತಿಮ್ಮಾ ರೆಡ್ಡಿಆಪ್ತರಾಗಿದ್ದರು. ಘಟನೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬಿಜೆಪಿ ಮುಖಂಡ ಆರೀಫ್‌ನ ಮೂರು ಬೆರಳುಗಳು ಕಟ್‌ ಆಗಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.