Belthangady: ಮಾಜಿ ಸಚಿವ ಗಂಗಾಧರ ಗೌಡ ಮತ್ತು ರಂಜನ್ ಗೌಡ ಆಸ್ತಿ ಪಾಸ್ತಿಯ ಮೇಲೆ ಬೆಳಂಬೆಳಿಗ್ಗೆ IT ದಾಳಿ !

Ex minister Gangadhar Gowda: ಬೆಳ್ತಂಗಡಿ : ಮಾಜಿ ಸಚಿವರೂ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಗಂಗಾಧರ ಗೌಡ (Ex minister Gangadhar Gowda) ಮತ್ತು ಮಗ ರಂಜನ್ ಗೌಡ ಅವರ ಮನೆಗಳಿಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಗಂಗಾಧರ ಗೌಡ, ರಂಜನ್‌ ಗೌಡ

 

ಒಟ್ಟು ಮೂರು ಸ್ಥಳಗಳಿಗೆ ಇಂದು ಏ.24 ರಂದು ಬೆಳಗ್ಗೆ ದಾಳಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯ ಮೇಲೆ, ಲಾಯಿದಲ್ಲಿರುವ ಪ್ರಸನ್ನ ಎಜುಕೇಶನ್ ಇನ್ಸಿಟ್ಯೂಷನ್ ಮತ್ತು ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

ಇಂದು ಬೆಳಗ್ಗೆ 6.30 ರ ಸುಮಾರಿಗೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ಬಂದು ದಾಳಿ ಮಾಡಿದ್ದು ಇನ್ನೂ ಪರಿಶೀಲನೆ ಮುಂದುವರಿದಿದೆ.

Leave A Reply

Your email address will not be published.