Karnataka Election 2023: ಕರ್ನಾಟಕ ಚುನಾವಣೆ; ಎಲ್ಲೆಲ್ಲೂ ಕಾಂಚಾಣದ ಆಟ, ಮರದಲ್ಲಿ, ರಸ್ತೆಯಲ್ಲಿ ಬರೀ ನೋಟುಗಳೇ!!!

Bengaluru South Constituency Clash Between BJP and Congress workers

Karnataka Election 2023: ಚುನಾವಣೆಗೆ (Karnataka Election 2023) ಕೇವಲ ಒಂದು ದಿನ ಬಾಕಿ ಇರೋದು. ನಾಳೆ ಮೇ.10 ರಂದು ಮತದಾನ (vote) ನಡೆಯಲಿದೆ. ಚುನಾವಣೆ ಹಿನ್ನೆಲೆ ಪಕ್ಷದ ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕೆಲ ಬಿಜೆಪಿ (bjp), ಕಾಂಗ್ರೆಸ್ (congress) ಅಭ್ಯರ್ಥಿಗಳ ಮನೆಗೆ ಐಟಿ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ವಶಪಡಿಸಿಕೊಂಡಿದೆ. ಇದೀಗ ಬೆಂಗಳೂರು (Bengaluru) ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಕಿತ್ತಾಟ ನಡೆದಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಕೆ.ರಮೇಶ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೃಷ್ಣಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಮನೆ ಮನೆಗೆ ತೆರಳಿ ಹಣ ಹಂಚಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಹಾಗೆಯೇ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರೂ ಆರೋಪಿಸಿದ್ದಾರೆ. ಕಾಂಗ್ರೆಸ್-ಬಿಜೆಪಿ ಕಿತ್ತಾಟದಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ನಂತರ ಪೊಲೀಸರಿಗೆ ಮಾಹಿತಿ ತಿಳಿಸಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಮಸ್ಯೆ ಬಗೆಹರಿಸಿದ್ದಾರೆ.

ಈ ವೇಳೆ ಫ್ಲೈಯಿಂದ ಸ್ಕ್ವಾಡ್​, ಕಾಂಗ್ರೆಸ್ ಮುಖಂಡೆ ಶೋಭಾ ಗೌಡ ಮನೆಯಲ್ಲಿ ಪರಿಶೀಲನೆ ನಡೆಸಲಾಯಿತು. ಆಗ ಮನೆಯ ಪಕ್ಕದಲ್ಲಿದ್ದ ಮರದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ಮರದ ಬುಡದಲ್ಲಿ ಬ್ಯಾಗ್​ನಲ್ಲಿ ಮೂರು ಲಕ್ಷ ರೂ.ನಷ್ಟು ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹಣ (money) ಪತ್ತೆ ಮತ್ತು ಕೈ, ಕಮಲದ ಕಿತ್ತಾಟದ ಹಿನ್ನೆಲೆಯಲ್ಲಿ ಕೆಲ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Vijay devarakonda: ವಿಜಯ್‌ ದೇವರಕೊಂಡ ಬರ್ತ್‌ಡೇಗೆ ಅಭಿಮಾನಿಗಳಿಗೆ ʼಖುಷಿʼಯ ಸುದ್ದಿ!

Leave A Reply

Your email address will not be published.