ರಾಜ್ಯಕ್ಕೆ ಎಷ್ಟೇ ಭಾರೀ ಪ್ರಧಾನಿ ಆಗಮಿಸಿದ್ರು ಪ್ರಯೋಜನವಿಲ್ಲ, ಕಾಂಗ್ರೆಸ್‌ ಮುನ್ನೆಡೆ ಸಾಧಿಸುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು : ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು ಮೇ.13ರಂದು ಮತದಾನ ಎಣಿಕೆ ಭರ್ಜರಿಯಾಗಿ ನಡೆಯುತ್ತಿದೆ. ಈ ಬಾರಿ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಎಷ್ಟೇ ಬಾರಿ ಬಂದ್ರು ಪ್ರಯೋಜನವಿಲ್ಲ ಎಂದು ಈ ಹಿಂದೆಯೇ ಹೇಳಿದ್ದೆ ಹಾಗೇ ಇದೀಗ ಭಾರೀ ಬಹುಮತದೊಂದಿಗೆ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದೆ.

ರಾಜ್ಯದಲ್ಲಿ ಬಿಜೆಪಿಯ ಕುತಂತ್ರ ಜನರಿಗೆ ತಿಳಿದಿದೆ ಹಾಗಾಗಿ ಕಾಂಗ್ರೆಸ್‌ ಮತ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್​ ಮುಂದಿದ್ದು, ಗೆಲುವು ಸಾಧಿಸುವ ಹಂತದಲ್ಲಿದ್ದಾರೆ ಈ ಬಾರಿ ಕಾಂಗ್ರೆಸ್‌ ಗೆಲುವು ಖಚಿತವಾಗುವ ನೀರಿಕ್ಷೆಯಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Leave A Reply

Your email address will not be published.