Andhra Pradesh: ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಏಳು ಮಂದಿ ಸಾವು!!

Andhra Pradesh accident 7 dead on spot

Andhra Pradesh accident: ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್‌ಗೆ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆ ಮುಂದಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಈ ಭೀಕರ ಅಪಘಾತ (Andhra Pradesh accident) ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಇವರನ್ನೆಲ್ಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತಗೊಂಡವರನ್ನು ತಾಡಿಪಾತ್ರಿ ನಿವಾಸಿಗಳೆದಂದು ಗುರುತಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಬಂದು ವಿವರ ಪಡೆದುಕೊಳ್ಳುತ್ತಿದ್ದಾರೆ. ಈ ಅಪಘಾತದ ಸಂದರ್ಭದಲ್ಲಿ ವಾಹನದಲ್ಲಿ ಒಟ್ಟು 11ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರತ್ಯೇಕ ಘಟನೆಯೊಂದರಲ್ಲಿ ಆಟೋಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಕಾಕಿನಾಡ ಜಿಲ್ಲೆಯ ತಲ್ಲರೇವು ಬೈಪಾಸ್‌ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು ಈ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಭಾನುವಾರ ತಾಳರೇವು ಬೈಪಾಸ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಖಾಸಗಿ ಬಸ್‌ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದರಲ್ಲಿ ಪ್ರಯಾಣ ಮಾಡುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪಘಾತ ಎಷ್ಟು ತೀವ್ರವಾಗಿತ್ತೆಂದರೆ ಬಸ್‌ ಅತಿವೇಗಕ್ಕೆ ಆಟೋ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ಅಲ್ಲಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು ಎಂದು ವರದಿಯಾಗಿದೆ. ಆಟೋದಲ್ಲಿ ಸುಮಾರು ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಈ ಘಟನೆ ನಡೆದ ಕೂಡಲೇ ಪೊಲೀಸರು ಮಾಹಿತಿಪಡೆದು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಮಾಡಿದ್ದಾರೆ.

ಇದನ್ನೂ ಓದಿ:ಉಜಿರೆ : ಅನಾಥ ವ್ಯಕ್ತಿ ಮೃತ್ಯು ,ಬ್ಯಾಗ್‌ನಲ್ಲಿ ಲಕ್ಷಾಂತರ ಹಣ ಪತ್ತೆ

Leave A Reply

Your email address will not be published.