C. M. Siddaramaiah: ಕಾನೂನ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು : ಹಿರಿಯ ಪೊಲೀಸರಿಗೆ ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

CM Siddaramaiah warns the police to stop illegal activities

CM Siddaramaiah: ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿಕೆಶಿವಕುಮಾರ್‌ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಇಂದು ಮೊದಲ ಹಿರಿಯ ಪೊಲೀಸರು ಅಧಿಕಾರಿಗಳ ಸಭೆ ನಡೆಸಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ​​ ಪ್ರತಾಪ್ ರೆಡ್ಡಿ, ಸಚಿವರಾದ ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್​​, ಸಿಎಂ (CM Siddaramaiah) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್​ ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿದ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕರ್ನಾಟಕದಲ್ಲಿ ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು,ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್​ಪಿ ಅವರನ್ನೇ ಹೊಣೆಗಾರರು. ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ ತಪ್ಪು ಮತ್ತೆ ಮರುಕಳಿಸಬಾರದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಅಪ್ಪಿತಪ್ಪಿಯೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಅಕ್ರಮ ನೈಟ್ ಕ್ಲಬ್​​ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್​​, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಬಿಜೆಪಿ ವಿರುದ್ಧ ಅದೇಷ್ಟೋ ಪ್ರಕರಣ ದಾಖಲಿಸಿದ ಬಗ್ಗೆ ಸಭೆಯಲ್ಲಿ ಪೊಲೀಸರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ.

 

ಇದನ್ನು ಓದಿ: KERC: ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ನಂಬರ್‌ – ಆಧಾರ್‌ ಲಿಂಕ್ ಮಾಡಲು ಸೂಚನೆ ನೀಡಿದ ಕೆಇಆರ್‌ಸಿ ; ರೈತರಿಗೆ ಕಗ್ಗಂಟಾಗಲಿದೆಯೇ ಈ ಶಿಫಾರಸು?! 

Leave A Reply

Your email address will not be published.