Murdeshwar beach: ಮುರ್ಡೇಶ್ವರದಲ್ಲಿ ಸಮುದ್ರ ಪಾಲಾದ ಇಂಜಿನಿಯರಿಂಗ್‌ ವಿದ್ಯಾರ್ಥಿ : ಇಬ್ಬರ ರಕ್ಷಣೆ

Uttar Kannada latest death news Engineering student death in murdeshwar beach and protection of two

Murdeshwar beach: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ (Murdeshwar beach) ಇಂಜಿನಿಯರಿಂಗ್‌ ವಿದ್ಯಾರ್ಥಿ ಈಜಲು ತೆರಳಿ ಸಮುದ್ರಪಾಲಾದ ಅಘಾತಕಾರಿ ಘಟನೆಯೊಂದು ನಡೆದಿದೆ.

ನೈಋತ್ಯ ಮುಂಗಾರಿನ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ‘ಬಿಪೊರ್ ಜಾಯ್’ ಚಂಡಮಾರುತ ಅಬ್ಬರ ಜೋರಾಗಿದ್ದು ಈ ನಡುವೆ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದ್ದರೂ, ಸಮುದ್ರದಲ್ಲಿ ಎಗ್ಗಿಲ್ಲದೇ ಆಟವಾಡೋದಕ್ಕೆ ತೆರಳಿದ ಆರು ಯುವಕರಲ್ಲಿ ಮೂವರು ಬಾಲಕರು ನೀರು ಪಾಲಾಗುತ್ತಿದ್ದಂತೆ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಅಲ್ಲದೇ ಓರ್ವ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿಯಲಾಗಿದೆ. ಮೃತಪಟ್ಟ ಯುವಕ ಬೆಂಗಳೂರು ಮೂಲದ ಪವನ್​ ನಾಯ್ಕ(20) ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಮುರ್ಡೇಶ್ವರಕ್ಕೆ 6 ಸ್ನೇಹಿತರು ಪ್ರವಾಸಕ್ಕೆಂದು ತೆರಳಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Sushanth Singh Rajput Death Anniversary: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ನಮ್ಮೊಂದಿಗೆ ಇಲ್ಲದೆ ಇಂದಿಗೆ ಮೂರು ವರ್ಷ!

Leave A Reply

Your email address will not be published.