IAS Officers Transfer: ರಾಜ್ಯ ಸರಕಾರದಿಂದ 10 ಐಎಎಸ್ ಅಧಿಕಾರಿಗಳ ವರ್ಗಾವಣೆ! ದ.ಕ ಡಿಸಿ, ಜಿ.ಪಂ. ಸಿಇಓ ಎಲ್ಲಿಗೆ ವರ್ಗಾವಣೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್!

karnataka politics Congress Government Transfer of 10 IAS Officers from State Govt

Share the Article

Congress Government: 2023 ರಾಜ್ಯ ಚುನಾವಣೆ ನಂತರ, ಕಾಂಗ್ರೆಸ್ ಆಳ್ವಿಕೆಯಲ್ಲಿ (Congress government) ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು, ಐಎಎಸ್-ಐಪಿಎಸ್ ನ 10 ​​ ಅಧಿಕಾರಿಗಳನ್ನು ವರ್ಗಾವಣೆ (IAS officers transfer) ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವೆಲ್ಲ ಐಎಎಸ್ಇ ಅಧಿಕಾರಿಗಳನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

10 ಐಎಎಸ್ ಅಧಿಕಾರಿಗಳ ವರ್ಗಾವಣೆ
ರವೀಂದ್ರ ಪಿ.ಎನ್ – ಡಿಸಿ ಚಿಕ್ಕಬಳ್ಳಾಪುರ
ಶ್ರೀನಿವಾಸ್ ಕೆ -ಡಿಸಿ ತುಮಕೂರು
ಜಾನಕಿ ಕೆ.ಎಂ -ಡಿಸಿ ಬಾಗಲಕೋಟೆ
ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ
ಯೋಗೇಶ್ ಎ.ಎಂ – ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
ಡಾ. ಕುಮಾರ- ಡಿಸಿ ಮಂಡ್ಯ
ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
ನವೀನ್ ಕುಮಾರ್ ರಾಜು- ಇಡಿ ವಸತಿ ಶಿಕ್ಷಣ ಸೊಸೈಟಿ
ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
ಡಾ. ವೆಂಕಟೇಶ್ ಎಂ.ವಿ – ಆಯುಕ್ತ, ಪಶುಸಂಗೋಪನಾ ಇಲಾಖೆ

 

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಡಾ. ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಮುಖ್ಯವಾಗಿ ಜಿಲ್ಲಾಧಿಕಾರಿಯಾಗಿದ್ದ ರವಿಕುಮಾರ್
ಎಂ.ಆರ್ . ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಸ್ಮಾರ್ಟ್ ಗವರ್ನೆನ್ಸ್ ಸೆಂಟರ್ ಹೆಚ್ಚುವರಿ ನಿರ್ದೇಶಕರಾಗಿದ್ದ ಮುಲ್ಫ್ ಮುಹಿಲನ್ ಅವರನ್ನು ದಕ್ಷಿಣ ಕನ್ನಡ ಡಿಸಿಯಾಗಿ ನೇಮಿಸಲಾಗಿದೆ.

 

ಇದನ್ನು ಓದಿ: ತುಳಸಿ ಗಿಡ ಹೀಗಿದ್ದಲ್ಲಿ ಗಂಡಾಂತರ ತಪ್ಪಿದ್ದಲ್ಲ  ಅದಕ್ಕಾಗಿ ತಪ್ಪದೇ ಈ ರೀತಿ ಮಾಡಿ!

Leave A Reply