ಚಲಿಸುತ್ತಿರುವ ಬಸ್‌ನಿಂದ ಕಳಚಿ ಬಿದ್ದ ಟಯರ್!‌ ಮುಂದೇನಾಯ್ತು?

Gadag news bus accident on drive tyre remove from nwkrtc bus in gadaga

Bus Accident: ಸರ್ಕಾರಿ ಬಸ್ಸುಗಳು ಇತ್ತೀಚೆಗೆ, ಅಂದರೆ ಶಕ್ತಿ ಯೋಜನೆ ಜಾರಿ ಆದ ನಂತರ ಅಲ್ಲಲ್ಲಿ ಕೆಟ್ಟು ನಿಲ್ಲುವುದು, ಇನ್ನಿತರ ಸಮಸ್ಯೆಗಳು ಉಂಟಾಗುವುದು ಬೆಳಕಿಗೆ ಬರುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ಘಟನೆ ನಡೆದಿದೆ.

ಹೌದು, ಚಲಿಸುತ್ತಿರುವ ಬಸ್​​ನಿಂದ ಟೈಯರ್​ ಕಳಚಿಕೊಂಡು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿರುವ ಭಯಾನಕ ಘಟನೆ(Bus Accident), ಗದಗ ತಾಲೂಕಿನ ತಗಡೂರು ಹಾಗೂ ಹೊಂಬಳ ಗ್ರಾಮದ ನಡುವೆ ನಡೆದಿದೆ.

ಮೂಲತಃ ಗದಗ ಡಿಪೋಗೆ ಸೇರಿದ ವಾಯವ್ಯ ಕರ್ನಾಟಕ ಸಾರಿಗೆ ಬಸ್, ಗದಗದಿಂದ ನರಗುಂದದ ಕಡೆ ಹೊರಟಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬಸ್​ನ ಹಿಂಬದಿಯ ಒಂದು ಚಕ್ರ ಕಳಚಿಕೊಂಡು ರಸ್ತೆ ಪಕ್ಕಕ್ಕೆ ಉರುಳಿಕೊಂಡು ಹೋಗಿ ಬಿದ್ದಿದೆ.

ಈ ಸಾರಿಗೆ ಬಸ್​ ಸುಮಾರು 50 ಜನ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಸದ್ಯ ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್​ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಬಸ್​ನ ಹಿಂಬದಿ ಚಕ್ರ ಕಳಚಿಕೊಂಡು ಉರುಳಿ ಹೋಗ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿದ್ದಾನೆ. ಈ ಘಟನೆ ದೃಶ್ಯವನ್ನು ಬಸ್​ನ ಹಿಂದೆ ಬರುತ್ತಿದ್ದ ಕಾರಿನಲ್ಲಿ ಇದ್ದವರು ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಘಟನೆಯಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟವರ ನಿರ್ಲಕ್ಷದಿಂದಲೇ ಈ ರೀತಿ ಘಟನೆ ನಡೆಯುತ್ತಲೇ ಇದೆ. ಇದಕ್ಕೆ ಸರಿಯಾದ ವ್ಯವಸ್ಥೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಐಎಎಡಿ ನೇಮಕಾತಿ 2023: ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಉದ್ಯೋಗಾವಕಾಶ! ಒಟ್ಟು 1773 ಹುದ್ದೆಗಳು, ಈ ಕೂಡಲೇ ಅರ್ಜಿ ಸಲ್ಲಿಸಿ

Comments are closed.