Udupi News: ಪ್ರೇಯಸಿಯ ಅಕಾಲಿಕ ಸಾವು; ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!!!

Udupi latest death news a student suicide due to lover death

Udupi News :ಪ್ರೇಯಸಿಯ ಅಕಾಲಿಕ ಸಾವಿನಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬ್ರಹ್ಮಾವರದಿಂದ ವರದಿಯಾಗಿದೆ (Udupi News).

ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ಬಾವಲಿಕುದ್ರು ಐಲ್ಯಾಂಡ್‌ ಹೋಮ್‌ ನ ನಿವಾಸಿ ಬಾವಲಿಕುದ್ರುವಿನ ಸುನೀತ ಡಿಸೋಜ ಎಂಬವರ ಮಗ ಸುಜಿತ್ ಡೇವಿಡ್ ಡಿಸೋಜ(21) ಮೃತ ದುದೈರ್ವಿ.

ಸಂತೆಕಟ್ಟೆ ಮಿಲಾಗ್ರಿಸ್ ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಇವರು ಭಾನುವಾರ ಬೆಳಗ್ಗೆ ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಜಿತ್ ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದು,ಇದರಿಂದ ಆತ ಮಾನಸಿಕವಾಗಿ ತೀವ್ರವಾಗಿ ನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

2ನೇ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಸುಜಿತ್ ಮನೆಯ ಹಾಲ್‌ನ ಸೀಲಿಂಗ್‌ ಫ್ಯಾನಿಗೆ ಪಂಚೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Accident:ಬೈಕ್-ಪಿಕ್‌ಅಪ್‌ ವಾಹನ ಡಿಕ್ಕಿ; ಐಸ್‌ಕ್ರೀಂ ಕೊಡಿಸಲೆಂದು 3 ಮಕ್ಕಳನ್ನು ಕರೆದುಕೊಂಡು ಹೋದಾಗ ಅಪಘಾತ!

Comments are closed.