Telangana : ಮದುವೆಗೆ ಹುಡುಗಿ ಹುಡುಕಿ ಕೊಟ್ಟಿಲ್ಲವೆಂದು ತಾಯಿಯ ಕೊಂದು ಕೈಕಾಲು ಕತ್ತರಿಸಿದ ಪಾಪಿ ಮಗ!

Telangana news a man kills mother for failing to find suitable match for marriage in Telangana

Telangana : ಮಗನೊಬ್ಬ ಮದುವೆಯಾಗಲು (marriage) ಸೂಕ್ತ ಹುಡುಗಿಯನ್ನು ಹುಡುಕಿ ಕೊಟ್ಟಿಲ್ಲವೆಂದು ಸಿಟ್ಟಿನಿಂದ ತಾಯಿಯನ್ನು ಕೊಲೆ (murder) ಮಾಡಿ ಆಕೆಯ ಕೈಕಾಲು ಕತ್ತರಿಸಿದ ಆಘಾತಕಾರಿ ಘಟನೆ ತೆಲಂಗಾಣದಲ್ಲಿ (Telangana) ಬೆಳಕಿಗೆ ಬಂದಿದೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ತಾಯಿ (45 ವ.) ತನ್ನ ಮದುವೆಗೆ ಸೂಕ್ತ ಜೋಡಿಯನ್ನು ಹುಡುಕಿ ಕೊಡಲಿಲ್ಲ ಎಂದು ಮಗನು ಆಕೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದಿದ್ದಾನೆ. ನಂತರ ಆಕೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾನೆ.

ಈ ಬಗ್ಗೆ ಮಹಿಳೆಯ ಮಗಳು ಪೊಲೀಸರಿಗೆ ದೂರು ನೀಡಿದ್ದು,
ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಈ ವೇಳೆ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಮಗ ಲಾಭಕ್ಕಾಗಿ ಕೊಲೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Anand Mahindra: ಭಾರತ ಬಡ ದೇಶ, ಚಂದ್ರಯಾನ-3 ಬೇಕಾ ಎಂದ ಬ್ರಿಟಿಷ್ ನಿರೂಪಕ ! ಆನಂದ್ ಮಹೀಂದ್ರಾ ನೀಡಿದ್ರು ಖಡಕ್ ಉತ್ತರ!!

Leave A Reply

Your email address will not be published.