Raichur:ವೈದ್ಯರ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

Raichur: ರಾಯಚೂರಿನ ಬೆಟ್ಟದೂರು ಆಸ್ಪತ್ರೆಯ ಮುಖ್ಯವೈದ್ಯರಾದ ಡಾ. ಜಯಪ್ರಕಾಶ್ ಪಾಟೀಲ್ (Raichur Bettadur Hospital Chief Physician Dr. Jayaprakash Patil)ಬೆಟ್ಟದೂರು ಅವರ ಕಾರಿನ ಮೇಲೆ ಗುರುವಾರ ಆಗಸ್ಟ್ ( 31) ರಂದು ಗುಂಡಿನ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಇಂದು ಅಪರಾಹ್ನದ ವೇಳೆಗೆ ರಾಯಚೂರು ಹೊರ ವಲಯದ ಸಾತ್ ಮೈಲ್ ಸಮೀಪ ಅಪರಿಚಿತರಿಂದ ಈ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದ್ದು, ಡಾ.ಜಯಪ್ರಕಾಶ್ ಪಾಟೀಲ್ ಅವರು  ದಾಳಿಯಿಂದ ಅದೃಷ್ಟವಶಾತ್ ಪಾರಾಗಿದ್ದಾರೆ.

ದ್ವಿಚಕ್ರವಾಹನದಲ್ಲಿ ಬಂದ ಕಿಡಿಗೇಡಿಗಳು ಇದಕ್ಕಿದ್ದಂತೆ ವೈದ್ಯರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಈ ಗುಂಡಿನ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಅಪರಿಚಿತರು ಯಾರೋ ವೈದ್ಯರಿಗೆ ಕರೆಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದು, ಅವರಿಗೆ ವೈದ್ಯರು ಹಣ ನೀಡದೆ ಇರುವ ಹಿನ್ನೆಲೆ ಈ ದಾಳಿ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಘಟನೆ ಕುರಿತು ರಾಯಚೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ಮತ್ತು ಪೋಲೀಸರು ಭೇಟಿ ನೀಡಿ ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.