ರಾತ್ರೋರಾತ್ರಿ ವರ್ಗಾವಣೆಯಾದ 8 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ತಡೆ

karnataka govt stay order to the tranfer of seven ips officer

ಬೆಂಗಳೂರು : ರಾತ್ರೋ ರಾತ್ರಿ ಬರೋಬ್ಬರಿ 35 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಈ ಪೈಕಿ 8 ಜನ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸರಕಾರ ತಡೆ ನೀಡಿ ಆದೇಶ ಹೊರಡಿಸಿದೆ.

ಈ ಕುರಿತು ಕೂಡಲೇ ಡಿಜಿ- ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆಯೂ ಸರಕಾರ ಸೂಚನೆ ನೀಡಿದೆ.

35 ಜನ ಐಪಿಎಸ್ ಅಧಿಕಾರಿಗಳಲ್ಲಿ ಇದೀಗ 8 ಅಧಿಕಾರಿಗಳಿಗೆ ತಡೆ ನೀಡಿದೆ.

ಅಕ್ಷಯ್ ಮಚ್ಚೀಂದ್ರ, ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್, ಶೇಖರ್ ಟೆಕ್ಕಣನವರ್, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಲಾಗಿದೆ.

ಸಂಜೀವ್ ಪಾಟೀಲ್ ವರ್ಗಾವಣೆಗೂ ರಾಜ್ಯ ಸರ್ಕಾರ ತಡೆ ನೀಡಿದ್ದು, ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

Leave A Reply

Your email address will not be published.