KSRTC: ಇನ್ಮುಂದೆ ಈ ಬಸ್ ಗಳಲ್ಲಿ ರಾಜ್ಯದಲ್ಲಿ ಮಹಿಳೆರಿಗೆ ಉಚಿತ ಪ್ರಯಾಣ ಇರೋದಿಲ್ಲ !!
No more free travel for women in these KSRTC buses in the state
![KSRTC](https://hosakannada.com/wp-content/uploads/2023/10/WhatsApp-Image-2023-10-07-at-4.00.40-PM.jpeg)
KSRTC: ಇಡೀ ವಿಶ್ವದಲ್ಲೇ ಕರ್ನಾಟಕದ KSRTC ಬಸ್ ಗಳು ಪ್ರಸಿದ್ಧಿ ಪಡೆದಿವೆ. ಕೆಲವು ತಿಂಗಳ ಹಿಂದಷ್ಟೇ ಒಂದರ ಹಿಂದೆ ಒಂದಂತೆ ಹಲವು ಪ್ರಶಸ್ತಿಗಳನ್ನು ಸಂಸ್ಥೆ ಮುಡಿಗೇರಿಸಿಕೊಂಡಿದೆ. ಈ ಬೆನ್ನಲ್ಲೇ ಕೆಎಸ್ಆರ್ಟಿಸಿಯಲ್ಲಿ ಇಂದಿನಿಂದ ಪಲ್ಲಕ್ಕಿ ಉತ್ಸವ ಆರಂಭವಾಗಲಿದೆ.
![](https://hosakannada.com/wp-content/uploads/2024/07/First.jpeg)
ಹೌದು, ಪಲ್ಲಕ್ಕಿ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. 148 ಬಸ್ಗಳ ಪೈಕಿ 40 ನಾನ್ ಎಸಿ ಸ್ಲೀಪರ್ ಬಸ್ಗಳಾಗಿವೆ. ಕೆಎಸ್ಸಾರ್ಟಿಸಿಯಲ್ಲಿ ಇದೇ ಮೊದಲ ಬಾರಿಗೆ ನಾನ್ ಎಸಿ ಬಸ್ಗೆ ಬ್ಯಾಂಡ್ ಹೆಸರನ್ನು ಇಟ್ಟುಸೇವೆ ನೀಡಲಾಗುತ್ತಿದೆ.
![](https://hosakannada.com/wp-content/uploads/2024/07/Middle.jpeg)
ಅಂದಹಾಗೆ 40 ನಾನ್ ಎಸಿ ಸ್ಲೀಪರ್ ಹಾಗೂ 100 ನಗರ ಸಾರಿಗೆ ಬಸ್ಸುಗಳು, ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ. ಇದನ್ನು ಹೊರತುಪಡಿಸಿ ಉಳಿದ 100 ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.
ಪಲ್ಲಕ್ಕಿ ವಿಶೇಷತೆ ಏನು?
* ಬಿಎಸ್-6 ತಂತ್ರಜ್ಞಾನದ ಮಾದರಿಯ ಎಚ್.ಪಿ.ಇಂಜಿನ್ ಅಳವಡಿಕೆ
* 11.3 ಮೀಟರ್ ಉದ್ದವಿರಲಿದೆ ನಾನ್ ಎಸಿ ಬಸ್
* ಹೈಟೆಕ್ ವಿನ್ಯಾಸದ 30 ಸ್ಲೀಪರ್ ಬರ್ತ್ ಸೀಟ್ಗಳು
* ಪ್ರತಿ ಸೀಟಿಗೂ ಮೊಬೈಲ್ ಹಾಗೂ ಲ್ಯಾಪ್ ಟಾಪ್ಗಳ ಚಾರ್ಜಿಂಗ್ ಹಾಗೂ ಮೊಬೈಲ್ ಸ್ಟ್ಯಾಂಡ್ ವ್ಯವಸ್ಥೆ
* ಸೀಟ್ ನಂಬರ್ ಮೇಲೆ ಎಲ್ಇಡಿ ಅಳವಡಿಕೆ
* ಓದಲು ಉತ್ತಮ ಬೆಳಕಿನ ಎಲ್ಇಡಿ ಲೈಟ್ ಅಳವಡಿಕೆ
* ಬಸ್ನಲ್ಲಿ ಆಡಿಯೋ ಸ್ವೀಕರ್ಗಳ ಮೂಲಕ ಜನರಿಗೆ ಮಾಹಿತಿ ನೀಡುವ ವ್ಯವಸ್ಥೆ
* ಡಿಜಿಟಲ್ ಗಡಿಯಾರ ಜತೆಗೆ ಎಲ್ಇಡಿ ಫ್ಲೋರ್
* ಪ್ರತಿ ಪ್ರಯಾಣಿಕರಿಗೆ ಚಪ್ಪಲಿ ಇಡಲು ಸ್ಥಳಾವಕಾಶದ ವ್ಯವಸ್ಥೆ
* ಪ್ರಯಾಣಿಕರಿಗೆ ತಲೆದಿಂಬಿನ ವ್ಯವಸ್ಥೆ
* ಚಾಲಕರಿಗೆ ಸಹಾಯವಾಗಲೂ ಬಸ್ ಹಿಂಭಾಗದಲ್ಲಿ ಹೈಟೆಕ್ ಕ್ಯಾಮರಾ ಅಳವಡಿಕೆ
* 40 ಬಸ್ಗಳ ಪೈಕಿ 30 ಬಸ್ಗಳು ರಾಜ್ಯದೊಳಗೆ, ಉಳಿದ 10 ಬಸ್ಗಳು ಬೆಂಗಳೂರಿನಿಂದ ಹೊರರಾಜ್ಯಗಳಿಗೆ ಸಂಚರಿಸಲಿವೆ.
ಕೆಎಸ್ಆರ್ಟಿಸಿಯಲ್ಲಿ ನಾನ್ ಎಸಿ ಸ್ಲೀಪರ್ ಬಸ್ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿದ್ದು, ಬಸ್ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್ ಮಾಡಿರಲಿಲ್ಲ. ಸದ್ಯ ಪಲ್ಲಕ್ಕಿ ಎಂಬ ಬ್ರ್ಯಾಂಡ್ ನೇಮ್ ಇಡಲಾಗಿದೆ. ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.