Dakshina Kannada: ಚೈತ್ರಾ ಡೀಲ್ ಕೇಸ್; ಹಿಂದೂ ಪರ ಸ್ವಾಮೀಜಿಗೆ ಸಿಸಿಬಿಯಿಂದ ನೋಟಿಸ್ ಜಾರಿ!!!
Chaitra deal case vajradehi shred and CCB notice
![Dakshina Kannada](https://hosakannada.com/wp-content/uploads/2023/10/WhatsApp-Image-2023-10-10-at-5.3.jpg)
Dakshina Kannada: ಬಿಜೆಪಿ ಟಿಕೆಟ್ ನೀಡುವುದಾಗಿ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ, ಈಗ ಸಿಸಿಬಿ ವಶದಲ್ಲಿರುವ ಚೈತ್ರಾ ಹಾಗೂ ಹಾಲಶ್ರೀ ಸ್ವಾಮೀಜಿ ಬಂಧನವಾಗಿ ತಿಂಗಳುಗಳೇ ಕಳೆದಿದೆ. ಇದೀಗ ದಕ್ಷಿಣ ಕನ್ನಡದ (Dakshina Kannada) ಹಿಂದೂ ಪರ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ ಎಂದು ವರದಿಯಾಗಿದೆ.
![](https://hosakannada.com/wp-content/uploads/2024/07/First.jpeg)
ಬೈಂದೂರಿನ ಬಿಜೆಪಿ ಟಿಕೆಟ್ ನೀಡುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚನೆ ನಡೆದಿದ್ದು, ಈ ಪ್ರಕರಣದ ಸಮಯದಲ್ಲಿ ಚೈತ್ರ ಇಡಿಗೆ ಪತ್ರ ಬರೆದಿದ್ದು, ಅದರಲ್ಲಿ ವಜ್ರಾದೇಹಿ ಶ್ರೀ, ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖ ಮಾಡಲಾಗಿತ್ತು.
![](https://hosakannada.com/wp-content/uploads/2024/07/Middle.jpeg)
ಮಂಗಳೂರು ಗುರುಪುರ ವಜ್ರಾದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗಲು ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ಅವರು ನೋಟಿಸ್ ಜಾರಿ ಮಾಡಿದ್ದಾರೆ.