DBT for Anna Bhagya scheme: ‘ರೇಷನ್ ಕಾರ್ಡ್’ದಾರರಿಗೆ ಮಹತ್ವದ ಮಾಹಿತಿ – ಕೂಡಲೇ ಈ ಕೆಲಸ ಮಾಡಿ, ಕುಳಿತಲ್ಲೇ ‘ಅನ್ನ ಭಾಗ್ಯದ’ ಹಣ ಪಡೆಯಿರಿ
Karnataka news Congress guarantee do this work immediately and get Anna Bhagya Yojana money
![](https://hosakannada.com/wp-content/uploads/2023/10/IMG-20231014-WA0034.jpg)
DBT for Anna Bhagya Yojana:
ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಗಾಗಿ ನೇರ ಲಾಭ ವರ್ಗಾವಣೆ (DBT)ಯೋಜನೆಯನ್ನು ಪ್ರಾರಂಭಿಸಿದ್ದು, ಇದು ಬಿಪಿಎಲ್ ಕಾರ್ಡುದಾರರಿಗೆ(Bpl card Holders)ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ನೀಡುತ್ತಿದೆ. ಅಂದರೆ ಈ ಹಣವನ್ನು ಅವರ ಆಧಾರ್ ಸಂಖ್ಯೆಗಳಿಗೆ (Aadhaar Number) ಲಿಂಕ್ ಮಾಡಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.
![](https://hosakannada.com/wp-content/uploads/2024/07/First.jpeg)
ರಾಜ್ಯ ಅನ್ನಭಾಗ್ಯ ಯೋಜನೆಯಡಿ(Anna Bhagya Yojana money) ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರ ಚೀಟಿದಾರರ ಖಾತೆಗೆ ಸೆಪ್ಟೆಂಬರ್ ತಿಂಗಳ ಹಣ ಕೆಲವರಿಗೆ ವರ್ಗಾವಣೆ ಆಗಿದ್ದು ಮತ್ತೆ ಕೆಲವರಿಗೆ ಇನ್ನೂ ಹಣ ವರ್ಗಾವಣೆಯಾಗಿಲ್ಲ. ಈ ನಡುವೆ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೆ ಇರುವ ಹಿನ್ನೆಲೆ ಅನ್ನಭಾಗ್ಯದ ಹಣ ಇನ್ನೂ ಕೆಲವು ಮಂದಿಗೆ ತಲುಪಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ಬ್ಯಾಂಕ್ ಖಾತೆಗೂ ಆಧಾರ್ ಜೋಡಣೆ ಮಾಡಿಸಬೇಕಾಗಿದ್ದು, ಹೀಗಾಗಿ ಇಕೆವೈಸಿ ಆಗದೆ ಇರುವ ಫಲಾನುಭವಿಗಳಿಗೆ ಡಿಬಿಟಿ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪಡಿತರ ಚೀಟಿದಾರರು ತಪ್ಪದೇ ಈ ಕೆಲಸ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದು, ಬ್ಯಾಂಕ್ ಮಾತ್ರವಲ್ಲದೆ ಅಂಚೆ ಕಚೇರಿಯಲ್ಲಿಯೂ ಕೂಡ ಖಾತೆ ಆರಂಭಿಸಬಹುದು. ಈ ಖಾತೆಗೆ ಆಧಾರ್ ಲಿಂಕ್ ಮಾಡಿಸಿದ್ದಲ್ಲಿ ಹಣ ಡಿಬಿಟಿ ಆಗಲಿದೆ.
ಹಣ ಬಂದಿದೆಯೇ ಎಂಬುದನ್ನು ಹೀಗೆ ತಿಳಿಯಿರಿ!
* ಆಹಾರ ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಿ.
* ಲಾಗಿನ್ ಆದ ಬಳಿಕ ನಿಮಗೆ ಸ್ಟೇಟಸ್ ಆಫ್ ಡಿಬಿಟಿ ಎನ್ನುವ ಆಯ್ಕೆ ಕಾಣಿಸಲಿದ್ದು, ಅದನ್ನು ಆಯ್ಕೆ ಮಾಡಿಕೊಳ್ಳಿ.
* ಆ ಬಳಿಕ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಅಥವಾ ಆರ್ ಸಿ ನಂಬರ್ ಭರ್ತಿ ಮಾಡಿ.
* ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣಿಸುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿಕೊಂಡು ಮುಂದುವರೆಯಿರಿ ಎಂಬ ಆಯ್ಕೆಯನ್ನು ಕ್ಕಿಕ್ಕಿಸಿ.
* ಮುಂದಿನ ಪುಟದ ಮೂಲಕ ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಎಂಬುದನ್ನು ತಿಳಿಯಬಹುದು.
* ಒಂದು ವೇಳೆ, ನಿಮ್ಮ ಖಾತೆಗೆ ಹಣ ಜಮೆ ಆಗದಿದ್ದರೆ, ಅದು ಯಾವ ಕಾರಣದಿಂದ ಜಮೆ ಆಗಿಲ್ಲ ಎಂಬ ಮಾಹಿತಿ ಕೂಡ ನಿಮಗೆ ದೊರೆಯಲಿದೆ.