Ration Card: ರೇಷನ್ ಕಾರ್ಡ್ ವಿಚಾರದಲ್ಲಿ ಸರ್ಕಾರಕ್ಕೆ ಭಾರೀ ದೊಡ್ಡ ಆಘಾತ – ಪಡಿತರ ಚೀಟಿ ಕುರಿತು ರಾತ್ರೋ ರಾತ್ರಿ ಬಂತು ಹೊಸ ರೂಲ್ಸ್

Karnataka news ration Card big update Ration card rules changed

Ration Card: ರೇಷನ್ ಕಾರ್ಡ್ (Ration Card) ವಿಚಾರದಲ್ಲಿ ಸರ್ಕಾರಕ್ಕೆ ಭಾರೀ ದೊಡ್ಡ ಆಘಾತ ಉಂಟಾಗಿದೆ. ಈ ಹಿನ್ನೆಲೆ ಪಡಿತರ ಚೀಟಿ ಕುರಿತು ರಾತ್ರೋ ರಾತ್ರಿ ಹೊಸ ರೂಲ್ಸ್ ಬಂದಿದೆ. ಹೌದು, ನಕಲಿ ವೋಟರ್‌ ಐಡಿ (Fake voter ID) ಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು (Former minister Suresh Kumar), ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಜನ್ಮ ದೃಢೀಕರಣ ಪತ್ರವನ್ನೂ ನೀಡದೆ ಆಧಾರ್ ಕಾರ್ಡ್ ಮಾಡಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ರೀತಿ ಚುನಾವಣಾ ಗೆಲುವಿಗಾಗಿ ಮಾಡಿಸಿದ್ದಾರೆ. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‌ನಲ್ಲಿ ಸಿದ್ಧಪಡಿಸಿದ ನಕಲಿ ಆಧಾರ್ ಕಾರ್ಡ್‍ಗಳನ್ನು ರದ್ದುಪಡಿಸಬೇಕು. ಅಪರಾಧಿಗಳು ತಪ್ಪಿಸಿಕೊಳ್ಳಲು ಬಿಡಬಾರದು. ಇದರ ಕುರಿತು ಚುನಾವಣಾ ಆಯೋಗಕ್ಕೂ ದೂರು ಕೊಡಲಿದ್ದೇವೆ. ಆಧಾರ್ ಕಾರ್ಡ್, ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದೆ. ಎನ್‍ಐಎ ಅಥವಾ ಸಿಬಿಐಗೆ ಈ ಪ್ರಕರಣವನ್ನು ಒಪ್ಪಿಸಲು ಕೋರಲಿದ್ದೇವೆ ಎಂದು ಎಸ್. ಸುರೇಶ್ ಕುಮಾರ್ ಹೇಳಿದರು.

ಇದನ್ನೂ ಓದಿ: Loan: ಬ್ಯಾಂಕಿನಲ್ಲಿ ಲೋನ್ ಮಾಡೋರಿಗೆ ಮಹತ್ವದ ಸುದ್ದಿ- ಪರ್ಸನಲ್ ಲೋನ್ ಗಿಂತಲೂ ಹೆಚ್ಚಿನ ಲಾಭ ಕೊಡುತ್ತೆ ಈ ಹೊಸ ಲೋನ್ !!

Leave A Reply

Your email address will not be published.