Kannada Rajyotsava: ಸರ್ಕಾರದಿಂದ ಶಾಲಾ ಕಾಲೇಜು, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಿಗೆ ಹೊಸ ಆಜ್ಞೆ – ತಕ್ಷಣದಿಂದ ಜಾರಿಗೆ ಆದೇಶ !

Karnataka news 5 Kannada songs compulsory to pay tribute to Kannadambe in Kannada Rajyotsava celebration

Kannada Rajyotsava : ನಮ್ಮ ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50, ‘ಹೆಸರಾಯಿತು, ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ನಡೆಸಲಾಗುತ್ತಿದೆ. ಇದರ ಅಂಗವಾಗಿ ನಮ್ಮ ಸರ್ಕಾರ ಆಯ್ಕೆ ಆಗಿರುವ ಕನ್ನಡದ ಹೆಸರಾಂತ ಕವಿಗಳ 5 ಕನ್ನಡ ಹಾಡುಗಳನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಯುವ ರಾಜ್ಯೋತ್ಸವ(Kannada Rajyotsava ) ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಡಬೇಕು. ಆ ಮೂಲಕ ಕನ್ನಡಾಂಬೆಗೆ ಗೀತ ಗಾಯನದ ನಮನಗಳನ್ನು ಸಮಸ್ತ ಕನ್ನಡಿಗರು ಸಲ್ಲಿಸಬೇಕೆಂದು ಸೂಚನೆ ನೀಡಲಾಗಿದೆ.

ಕರ್ನಾಟಕ-50 ಸಂಭ್ರಮ ಹಿನ್ನೆಲೆಯಲ್ಲಿ ಏನೆಲ್ಲಾ ಯೋಜನೆ ಇದೆ?
2023 ನವೆಂಬರ್ 1 ರಿಂದ 2024ರ ನವೆಂಬರ್ 1ರ ವರೆಗೆ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಹಾಗಾಗಿ ನ. 1 ರಂದು ರಾಜ್ಯದೆಲ್ಲೆಡೆ ಆಚರಿಸುವ ರಾಜೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ರಾಷ್ಟ್ರ ಗೀತೆ, ನಾಡಗೀತೆ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ 5 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕೆಂದು ಸರ್ಕಾರ ಆದೇಶಿಸಿದೆ.

ಎಲ್ಲಾ ಶಾಲೆಗಳಲ್ಲಿ, ಕಾಲೇಜು, ವಿಶ್ವವಿದ್ಯಾಲಯಗಳು, ಸರ್ಕಾರಿ, ಅರೆ-ಸರ್ಕಾರಿ, ನಿಗಮ ಮಂಡಳಿಗಳ ಕಚೇರಿಗಳು, ಬ್ಯಾಂಕ್ಗಳು ಹಾಗೂ ಸಂಘ ಸಂಸ್ಥೆಗಳು ನವೆಂಬರ್ 1 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಕನ್ನಡ ಹಾಡುಗಳನ್ನು ಹಾಡುವ ಮೂಲಕ ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸಬೇಕೆಂದು ತಿಳಿಸಲಾಗಿದೆ.

ಈ 5 ಕನ್ನಡ ಗೀತೆಗಳು ಗೀತ ಗಾಯನದ:
1. ಹುಯಿಲಗೋಳ ನಾರಾಯಣರಾಯರ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”. 2. ಕುವೆಂಪು ಅವರ “ಎಲ್ಲಾದರು ಇರು ಎಂತಾದರು ಇರು”
3. ದ.ರಾ.ಬೇಂದ್ರೆ ಅವರ “ಒಂದೇ ಒಂದೇ ಕರ್ನಾಟಕವೊಂದೇ”
4. ಸಿದ್ದಯ್ಯ ಪುರಾಣಿಕ ಅವರ “ಹೊತ್ತಿತ್ತೋ ಹೊತ್ತಿತ್ತು ಕನ್ನಡದ ದೀಪ”
5. ಚನ್ನವೀರ ಕಣವಿ ಅವರ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ”

ಇದನ್ನೂ ಓದಿ: ಮಂಗಳೂರು ಪೊಲೀಸರಿಂದ ಕಾಲೇಜು ವಿದ್ಯಾರ್ಥಿಗಳಿಗೆ ರೀಲ್ಸ್, ಪೋಸ್ಟರ್ ಸ್ಪರ್ಧೆ ಆಯೋಜನೆ

Leave A Reply

Your email address will not be published.