Rain Alert: ಮುಂದಿನ 5 ದಿನ ರಾಜ್ಯದ ಈ ಪ್ರದೇಶದಲ್ಲೆಲ್ಲಾ ಆರ್ಭಟಿಸಲಿದ್ದಾನೆ ಮಳೆರಾಯ!!

Rain Alert: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಇದರ ನಡುವೆ,ಹವಾಮಾನ ಇಲಾಖೆ(IMD)ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿರುವ(Rain Alert)ಮಾಹಿತಿ ನೀಡಿದೆ. ರಾಜ್ಯದಲ್ಲಿ 5 ದಿನಗಳವರೆಗೆ ಕೆಲವೆಡೆ ಭಾರೀ ಮಳೆ, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ(Heavy Rain)ಜೋರಾಗಿರಲಿದ್ದು, ಯೆಲ್ಲೋ ಅಲರ್ಟ್(Yellow Alert)ಘೋಷಿಸಲಾಗಿದೆ. ಆಯಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಇದರ ಜೊತೆಗೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆ ಯಾಗಲಿದೆ. ಈ ಜಿಲ್ಲೆಗಳಲ್ಲಿ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕೋಲಾರ, ಚಾಮರಾಜನಗರ, ತುಮಕೂರು, ರಾಮನಗರದಲ್ಲಿ ವರುಣನ ಆರ್ಭಟ ಭೀತಿ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನು ಓದಿ: Bay Leaf Tips: ಈ ಒಂದು ಎಲೆ ಸಾಕು, ನಿಮ್ಮ ಎಲ್ಲಾ ಕಷ್ಟಗಳನ್ನು ಓಡಿಸುತ್ತೆ!

Leave A Reply

Your email address will not be published.