Bengaluru Crime News: ಬೆಳಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗಳ ಕಿಡ್ನ್ಯಾಪ್‌ ಮಾಡಿದ ವ್ಯಕ್ತಿ!!

Bengaluru News: ವ್ಯಕ್ತಿಯೊಬ್ಬ ಫರ್ನಿಚರ್‌ ಅಂಗಡಿಯೊಂದಕ್ಕೆ ಕೆಲಸಕ್ಕೆ ಸೇರಿದ್ದು, ಅದೇ ದಿನ ಮಧ್ಯಾಹ್ನ ಮಾಲೀಕನ ನಾಲ್ಕು ವರ್ಷದ ಮಗಳನ್ನು ಅಪಹರಿಸಿಕೊಂಡು(Kidnap Case) ಹೋದ ಘಟನೆಯೊಂದು ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ಇತ್ತೀಚೆಗೆ ನಡೆದಿದೆ. ಈ ಘಟನೆ ಡಿ.28 ರಂದು ನಡೆದಿದೆ. ಆರೋಪಿ ವಸೀಂ ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಆರೋಪಿ ವಸೀಂ ಡಿ.28 ಕ್ಕೆ ಬನಶಂಕರಿ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿರುವ ಶಫೀವುಲ್ಲ ಎಂಬುವವರ ಫರ್ನಿಚರ್‌ ಶಾಪ್‌ಗೆ ಬೆಳಗ್ಗೆ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಈತ ಈ ಮೊದಲು ಕೂಡಾ ಇಲ್ಲಿ ಕೆಲಸ ಮಾಡಿದ್ದು, ಅನಂತರ ಬಿಟ್ಟು ಹೋಗಿದ್ದ. ಅನಂತರ ಈತ ಡಿ.28 ಕ್ಕೆ ವಾಪಸ್‌ ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಕಣ್ಣೀರು ಹಾಕಿದ್ದ. ಆತನ ಮನವಿಗೆ ಕರಗಿ ಶಫೀವುಲ್ಲ ಕೆಲಸ ಕೊಟ್ಟಿದ್ದರು.

ಇದನ್ನು ಓದಿ: Metaverse: ದೈಹಿಕವಾಗಿ ಹಿಂಸಿಸದೆ 16ರ ಹುಡುಗಿ ಮೇಲೆ ನಡೆಯಿತು ಭೀಕರ ಗ್ಯಾಂಗ್ ರೇಪ್ – ಯಪ್ಪಾ.. ಏನಿದು ವಿಚಿತ್ರ ಕೇಸ್?!

ಕೆಲಸಕ್ಕೆ ಸೇರಿದ ದಿನವೇ ಮಧ್ಯಾಹ್ನದ ವೇಳೆಗೆ ಚಾಕಲೇಟ್ ಕೊಡಿಸ್ತೇನೆಂದು ಮಗುವನ್ನ ಪುಸಲಾಯಿಸಿ ಕರೆದುಕೊಂಡು ವಸೀಂ ಪರಾರಿಯಾಗಿದ್ದಾನೆ ಎಂದು ಶಫೀವುಲ್ಲಾ ಆರೋಪಿಸಿದ್ದಾರೆ ಎಂದು ಟಿವಿ9 ವರದಿ ಮಾಡಿದೆ.

ಶಫೀವುಲ್ಲಾ ಅವರು ಪತ್ನಿಯಿಂದ ವಿಚ್ಛೇದನ ಪಡೆದಿದ್ದು, ಮಗಳೊಂದಿಗೆ ವಾಸಿಸುತ್ತಿದ್ದರು. ಇದೀಗ ಈ ಘಟನೆ ಸಂಬಂಧ ಶಫೀವುಲ್ಲ ಅವರು ಬನಶಂಕರಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.