Uppinangady: ಏಕಮುಖ ಪ್ರೀತಿ, ವರನ ಬೈಕಿಗೆ ಬೆಂಕಿ; ಆರೋಪಿ ಪತ್ತೆ!!

Puttur: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾಗಿದ್ದಾಳೆಂಬ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ಸಮಯದಲ್ಲಿ ಸುಟ್ಟು ಹಾಕಿದ ಕೃತ್ಯವೊಂದು ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್‌ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರೀತಿಸಿದ ಹುಡುಗಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಈ ರೀತಿಯಾಗಿ ಮಾಡಿದ್ದೇನೆ ಎಂದು ಆರೋಪಿ ಹೇಳಿದ್ದಾನೆಂದು ವರದಿಯಾಗಿದೆ.

ತನ್ನದೇ ಗ್ರಾಮದ ಯುವತಿಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಜ.3 ರಂದು ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು ಎನ್ನಲಾಗಿದೆ. ಆಕೆಯನ್ನು ಮದುವೆಯಾದ ವ್ಯಕ್ತಿಯ ಮೇಲೆ ಈ ಆರೋಪಿಗೆ ಸಿಟ್ಟಿತ್ತು ಎನ್ನಲಾಗಿದ್ದು, ಜ.6 ರಂದು ಈಕೆ ತನ್ನ ಗಂಡನೊಂದಿಗೆ ತವರಿಗೆ ಬಂದಿದ್ದಳು.

ಇದನ್ನೂ ಓದಿ: MRPL ನಲ್ಲಿ ಉದ್ಯೋಗಾವಕಾಶ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಹೆಚ್ಚಿನ ವಿವರ ಇಲ್ಲಿದೆ!!

ರಾತ್ರಿ ಸಮಯದಲ್ಲಿ ಮನೆಯ ಸಮೀಪದ ನಿಲ್ಲಿಸಿದ್ದ ಬೈಕಿಗೆ ಬೆಂಕಿ ಹಚ್ಚಲಾಗಿತ್ತು. ಬೈಕನ್ನು 100 ಕೀ.ಮೀ.ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಕುರಿತು ವರ ಉಪ್ಪಿನಂಗಡಿಗೆ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಆರೋಪಿ ಬೈಕ್‌ ಸುಟ್ಟಿದ್ದು ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲಿನ ಸಿಟ್ಟಿನಿಂದ ಮಾಡಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರಲ್ಲಿ ಹೇಳಿರುವುದು ವರದಿಯಾಗಿದೆ.

Leave A Reply

Your email address will not be published.