Holiday: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಕೇಂದ್ರ ನೌಕರರಿಗೆ ಗುಡ್ ನ್ಯೂಸ್: ಜನವರಿ 22 ರಂದು ರಜೆ ಘೋಷಣೆ!!
Holiday: ಜನವರಿ 22ರಂದು ಅಯೋಧ್ಯೆಯಲ್ಲಿ(Ayodhya)ನಡೆಯಲಿರುವ ‘ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ’ ಸಮಾರಂಭದ ಹಿನ್ನೆಲೆ ಕೇಂದ್ರ ಸರ್ಕಾರ(Central Government)ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ರಜೆ (Half Day Holiday)ನೀಡುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರದಿಂದ ಇಡೀ ದೇಶವೇ ಕಾತುರದಿಂದ ಎದುರು ನೋಡುತ್ತಿರುವ ರಾಮ ಮಂದಿರದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲವೇ ವೀಕ್ಷಿಸಲು ಅಧಿಕಾರಿಗಳಿಗೆ ಅನುವು ಮಾಡಿಕೊಡಲಿದೆ.