Udupi ಯಲ್ಲಿ ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ!!!
![](https://hosakannada.com/wp-content/uploads/2024/01/IMG-20240120-WA00091.jpg)
Udupi: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆಯೊಂದು ಗುರುವಾರ ರಾತ್ರಿ ನಡೆದಿದೆ. ಈ ಘಟನೆ ಬನ್ನಂಜೆಯಲ್ಲಿ ನಡೆದಿದೆ.
![](https://hosakannada.com/wp-content/uploads/2024/07/First.jpeg)
ಜೆಎಮ್ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶಿರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ವೊಂದರ ಮ್ಯಾನೇಜರ್ ಹಾಗು ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿ ಇರಿದಿರುವ ಕುರಿತು ವರದಿಯಾಗಿದೆ.
![](https://hosakannada.com/wp-content/uploads/2024/07/Middle.jpeg)
ಉಡುಪಿ ಸಿಟಿ ಬಸ್ ಚಾಲಕರ ನಡುವೆ ಪರ್ಯಾದ ದಿನದಂದು ಗಲಾಟೆ ನಡೆದಿತ್ತು. ಈ ವಿಚಾರವಾಗಿ ಠಾಣೆಯಲ್ಲಿ ರಾಜಿ ಪಂಚಾಯಿತಿ ಮಾಡಲಾಗಿತ್ತು. ಅನಂತರ ಈ ಕೃತ್ಯ ಎಸಗಿರುವ ಘಟನೆ ವರದಿಯಾಗಿದೆ. ಗಾಯಗೊಂಡಿದ್ದ ಬಸ್ ಚಾಲಕರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.