Ayodhya: ಅಯೋಧ್ಯೆ ರಾಮಮಂದಿರ ಉದ್ಘಾಟನೆ: 7 ಸಾವಿರ ಗಣ್ಯರು, 506 ಮಂದಿ A ಲಿಸ್ಟ್ ನಲ್ಲಿ!

Ayodhya: ಶತಮಾನಗಳ ಹಿಂದೂ ಜನರ ಬೇಡಿಕೆಯಾದ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಮಾರಂಭ ನಡೆಯುತ್ತಿದೆ.

ಅಯೋಧ್ಯೆಯ ರಾಮಮಂದಿರ ಆವರಣದಲ್ಲಿ ನಡೆಯುತ್ತಿರುವ ಸಮಾರಂಭಕ್ಕೆ 7000 ಕ್ಕೂ ಹೆಚ್ಚು ಗಣ್ಯರನ್ನು ಆಹ್ವಾನಿಸಲಾಗಿದೆ. ಈಗಾಗಲೇ ಬಹುತೇಕ ಗಣ್ಯರು ಅಯೋಧ್ಯೆ ತಲುಪಿದ್ದಾರೆ. ಅಂತೆಯೇ ಆಯ್ದ ಪಟ್ಟಿಯಲ್ಲಿ 506 ಎ-ಲಿಸ್ಟರ್‌ ಗಣ್ಯರೂ ಇದ್ದು, ಬಾಲಿವುಡ್‌ ಸೂಪರ್‌ಸ್ಟಾರ್‌ ಅಮಿತಾಭ್‌ ಬಚ್ಚನ್‌, ಮುಖೇಶ್‌ ಅಂಬಾನಿ, ಗೌತಮ್‌ ಅದಾನಿ, ಸಚಿನ್‌ ತೆಂಡೂಲ್ಕರ್‌ ಈ ಆಹ್ವಾನದಲ್ಲಿದ್ದಾರೆ. ಇಡೀ ಕಾರ್ಯಕ್ರಮಕ್ಕೆ ಅಭೂತಪೂರ್ವ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ಉದಯೋನ್ಮುಖ ಫುಟ್ಬಾಲ್ ಆಟಗಾರ ಮೃತ್ಯು; ಸಿಎಂ ಸಿದ್ದರಾಮಯ್ಯ ಸಂತಾಪ!!

2019 ರಲ್ಲಿ ಸುಪ್ರೀಂ ಕೋರ್ಟ್‌ ರಾಮಜನ್ಮಭೂಮಿ-ಬಾಬರಿ ಮಸೀದಿ ಶೀರ್ಷಿಕೆ ಮೊಕದ್ದಮೆಯಲ್ಲಿ ಈ ದೇವಾಲಯದ ಶಂಕುಸ್ಥಾಪನೆ ಆಗಿದೆ. ರಾಮನ ಜನ್ಮಸ್ಥಳದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ದಾವೆದಾರರು ವಾದ ಮಾಡಿದ್ದರು. 1992 ರಲ್ಲಿ 16 ನೇ ಶತಮಾನದ ಮಸೀದಿಯನ್ನು ಕೆಡವಲಾಗಿತ್ತು. ಇದೀಗ ಸುಪ್ರೀಂಕೋರ್ಟ್‌ನ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಗೊಂಡಿದೆ.

Leave A Reply

Your email address will not be published.